tamanvi
ಕರಾವಳಿ

ಮನೆ ಗೋಡೆಯಲ್ಲಿ ಮರಿಯಿಟ್ಟ ತಾಯಿ ನಾಗರ! 26 ಮರಿಗಳ ರಕ್ಷಿಸಿದ ಶೌರ್ಯ ತಂಡದ ಉರಗಪ್ರೇಮಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

maithri

ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಮೇ 6ರಂದು ಮಾಹಿತಿ ನೀಡಿದರು. ಈ ವೇಳೆ ಆಗಮಿಸಿದ ಅವರು ತಾಯಿ ನಾಗರಹಾವನ್ನು ಹಿಡಿದಿದ್ದು ಈ ವೇಳೆ ಗೋಡೆಯಲ್ಲಿ ಮರಿಗಳು ಕಂಡು ಬಂದವು. ಗೋಡೆಯಲ್ಲಿದ್ದ 26 ಮರಿಗಳನ್ನು ಹಿಡಿದು ಅವುಗಳನ್ನು ತಾಯಿ ಸಹಿತ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದ ಸುರಕ್ಷಿತ ಜಾಗದಲ್ಲಿ ಮೇ 7ರಂದು ಬಿಡಲಾಗಿದೆ.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸಹಕರಿಸಿದರು. ಈ ಮರಿಗಳು ಸುಮಾರು 10 ದಿನಗಳ ಹಿಂದೆ ಮೊಟ್ಟೆಯಿಂದ ಹೊರಬಂದಿರಬಹುದು ಎಂದು ಅಂದಾಜಿಸಲಾಗಿದ್ದು ಎಲ್ಲವೂ ಆರೋಗ್ಯ ಪೂರ್ಣವಾಗಿ ಇರುವುದಾಗಿ ಅನಿಲ್ ಅವರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ನೆರಿಯ ಗ್ರಾಮದ ಗುಂಡಿಕಂಡ ಎಂಬಲ್ಲಿ ಮನೆಯ ಗೋಡೆಯೊಂದರಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ಅನಿಲ್ ಅವರು ರಕ್ಷಿಸಿ ಅವುಗಳಿಗೆ ಕೃತಕ ಕಾವು ನೀಡಿ ಮರಿಗಳು ಹೊರಬಂದ ಬಳಿಕ ಭಾನುವಾರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು. ಈ ಮೊಟ್ಟೆಗಳನ್ನು ಇರುವೆಗಳ ದಾಳಿಯಿಂದ ರಕ್ಷಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…