tamanvi
ಕರಾವಳಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹೊರಗೆ ಕುಸಿದುಬಿದ್ದು ಮೃತ್ಯು: ನಿರ್ಲಕ್ಷ್ಯ ಆರೋಪ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ:  ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರ ಮೃತದೇಹ ಆಸ್ಪತ್ರೆಯ ಹೊರ ವರಾಂಡದಲ್ಲಿ ಕಂಡುಬಂದಿದ್ದು, ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಆತ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ.

maithri

ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಯುತ(42) ಮೃತಪಟ್ಟವರು. ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಇವರು ಮೇ 10 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇಂದು ಮುಂಜಾನೆ ಐದು ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಒಂಟಿಯಾಗಿ ಹೊರಗಡೆ ಹೋಗಿದ್ದು, ಆಸ್ಪತ್ರೆಯ ಹಿಂಭಾಗದ ಡಯಾಲಿಸಿಸ್ ಕೇಂದ್ರದ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಚಿಕಿತ್ಸೆಯಲ್ಲಿದ್ದ ರೋಗಿಯೊಬ್ಬರು ಒಂಟಿಯಾಗಿ ಹೊರಹೋಗುವಂತೆ ಮಾಡಿ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯಲೋಪ ಎಸಗಿದ್ದಾರೆ. ಇದರಿಂದ ಅಚ್ಯುತ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಅಚ್ಯುತರ ಕುಟುಂಬ ಬಡತನದಲ್ಲಿದೆ. ಪತ್ನಿ ಕೂಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…