tamanvi
ಕರಾವಳಿ

ಸೌತಡ್ಕ ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಮಗು ಅಸ್ವಸ್ಥ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಅಸ್ವಸ್ಥಗೊಂಡ ಘಟನೆ ಜು.14ರಂದು ನಡೆದಿದೆ.

maithri

ಅಸ್ವಸ್ಥಗೊಂಡ ಬಾಲಕಿಯನ್ನು ಕೊಕ್ಕಡ ಮಲ್ಲಿಗೆಮಜಲು ಮಸೀದಿ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಫಾತಿಮತ್ ಸಹದಿಯಾ (4) ಎಂದು ಗುರುತಿಸಲಾಗಿದೆ.

ಎಂದಿನಂತೆ ಅಂಗನವಾಡಿಗೆ ತೆರಳಿದ್ದ ಬಾಲಕಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅಂಗನವಾಡಿಯೊಳಗೆ ಜೋಡಿಸಿಟ್ಟಿದ್ದ ಮಕ್ಕಳ ಆಟಿಕೆಗಳ ನಡುವೆ ಅಡಗಿದ್ದ ಹಾವು ಕಚ್ಚಿದೆ. ತಕ್ಷಣ ಬಾಲಕಿ ಜೋರಾಗಿ ಅಳಲಾರಂಭಿಸಿದ್ದು, ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಲಕಿಯನ್ನು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.

ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಬಾಲಕಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ವೇಳೆ ಅಂಗನವಾಡಿ ಶಿಕ್ಷಕಿ ಬಿಎಲ್‌ಒ ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದು, ಕೇಂದ್ರದಲ್ಲಿ ಸಹಾಯಕಿ ಮಾತ್ರ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…