tamanvi
ಕರಾವಳಿ

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ ಸಾರೆಪುಣಿಗೆ ಪುತ್ತೂರು ಕಾಂಗ್ರೆಸ್ ಘಟಕದ ಪ್ರಮುಖರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು.

maithri

ಶಾಸಕ ಅಶೋಕ್ ಕುಮಾರ್ ರೈ ಅವರ ನಿರ್ದೇಶನದಂತೆ ಕಾಂಗ್ರೆಸ್ ಪ್ರಮುಖರ ವಿಶೇಷ ನಿಯೋಗ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ತುಂಬಿದರು.

ಕುಂಬ್ರ ಸಾರೆಪುಣಿ ನಿವಾಸಿಗಳಾದ ಹನೀಫ್ ಹಾಗೂ ಜುಬೈದಾ ದಂಪತಿಯ ಏಕೈಕ ಪುತ್ರಿ ಫಾತಿಮತ್ ನಿಶಾನ (22 ವ) ಅವರನ್ನು ಕಲ್ಲುಗುಂಡಿಯ ಅನ್ಸಾರ್ ಎಂಬವರಿಗೆ ನಾಲ್ಕು ವರ್ಷದ ಹಿಂದೆ ವಿವಾಹ ಮಾಡಿ ಕೊಟ್ಟಿದ್ದು, ಇತ್ತೀಚೆಗೆ ಗಂಡನ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ನಿಶಾನ ಅವರಿಗೆ 2.5 ವರ್ಷದ ಮಗುವಿದ್ದು, ಪತಿ ಬೆಂಗಳೂರಿನಲ್ಲಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ನಿಶಾನ ಅವರ ಸಾವಿನಲ್ಲಿ ಅವರ ಅತ್ತೆ, ಮಾವ, ನಾದಿನಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಶಾಸಕರು ನಿಯೋಗವನ್ನು ಕಳುಹಿಸಿಕೊಟ್ಟಿದ್ದರು.

ನಿಯೋಗದಲ್ಲಿ ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಮಾನ್ ಆಜಾದ್ ದರ್ಬೆ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಪ್ರಭ ಗೌಡ, ಮುಖಂಡರಾದ ಇಬ್ರಾಹಿಂ ಗೋಳಿಕಟ್ಟೆ, ಶರೀಫ್ ಬಲ್ನಾಡ್, ನೌಷಾದ ಬೊಳುವಾರ್, ಸಿನಾನ್ ದರ್ಬೆ, ಹಬೀಬ್ ಕಣ್ಣೂರು, ಬದ್ರುನ್ನೀಸಾ, ಪುರಂದರ ರೈ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts