ಕರಾವಳಿ

ಹಾಸನ: ಕಾನ್ಸ್‌ಟೇಬಲ್‌ ಬರ್ಬರ ಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ

maithri

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್‌ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್‌ ಕಾನ್ಸ್‌ಟೇಬಲ್.

ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು.

ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ

ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ದುದ್ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಾಸನ ಎಸ್ಪಿ ಮುಹಮ್ಮದ್ ಸುಜೇತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…