ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25.). ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಣೇಶ್ ಅವರು ಸೋಮವಾರದಂದು ಮನೆಯಲ್ಲಿಯೇ ಸಂಜೆ 4.10ರ ವೇಳೆ ಹುಲ್ಲಿಗೆ ಬಿಡುವ ವಿಷ ಅನಿಲವನ್ನು ಸೇವಿಸಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು (ನ.6) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.




















