ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ ವಾಟ‌ರ್ ಮೆಟ್ರೋ.!!

ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

akshaya college

ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ (MWMP) ಸಮಗ್ರವಾದ ಯೋಜನಾ ವರದಿಯನ್ನು(DPR) ರೂಪಿಸಲು ನಿರ್ಧರಿಸಿದೆ. ಈ ಯೋಜನೆ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ ಬಜಾಲ್ ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ.

ಈ ಯೋಜನೆ ಜಾರಿಗೆ ಬಂದರೆ ಕೊಚ್ಚಿಯ ನಂತರ ಭಾರತದ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಲಿದೆ. ಈ ಯೋಜನೆಯು ಪರಿಸರ ಸ್ನೇಹಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್ ದೂರದವರೆಗೆ ಬೋಟ್ ಸಂಚರಿಸಲಿದೆ. ಬಳಿಕ ಬಜಾಲ್‌ನಿಂದ ಪ್ರಾರಂಭವಾಗಿ ಗುರುಪುರದ ಮರವೂರು ಸೇತುವೆಯವರೆಗೆ ವಿಸ್ತರಿಸಲಿದೆ. ಇದು ಸುಮಾರು 17 ಆಧುನಿಕ ಮೆಟ್ರೋ ನಿಲ್ದಾಣಗಳನ್ನು ಹೊಂದಿರಲಿದೆ. ಯೋಜನೆಯು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲಿದೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲಿದೆ ಎಂದು ಕೆಎಂಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಯೋಜನೆ ಜಾರಿಗೆ ಬಂದರೆ ಕೊಚ್ಚಿಯ ನಂತರ ಭಾರತದ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಲಿದೆ. ಈ ಯೋಜನೆಯು ಪರಿಸರ ಸ್ನೇಹಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್ ದೂರದವರೆಗೆ ಬೋಟ್ ಸಂಚರಿಸಲಿದೆ. ಬಳಿಕ ಬಜಾಲ್‌ನಿಂದ ಪ್ರಾರಂಭವಾಗಿ ಗುರುಪುರದ ಮರವೂರು ಸೇತುವೆಯವರೆಗೆ ವಿಸ್ತರಿಸಲಿದೆ. ಇದು ಸುಮಾರು 17 ಆಧುನಿಕ ಮೆಟ್ರೋ ನಿಲ್ದಾಣಗಳನ್ನು ಹೊಂದಿರಲಿದೆ. ಯೋಜನೆಯು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲಿದೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲಿದೆ ಎಂದು ಕೆಎಂಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಟ್ರಾಫಿಕ್ ಸಮಸ್ಯೆಗೆ ಪರಿಹಾರ ಮತ್ತು ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಸೋಮೇಶ್ವರ ದೇವಸ್ಥಾನ, ಉಳ್ಳಾಲ ಮತ್ತು ನವಮಂಗಳೂರು ಬಂದರು ಮುಂತಾದ ಪ್ರಮುಖ ಸ್ಥಳಗಳನ್ನು ಉದ್ದೇಶಿತ ಮಾರ್ಗದಲ್ಲಿ ಸೇರಿಸಲಾಗಿದೆ. ಈ ಯೋಜನೆಯಡಿ ಅತ್ಯಾಧುನಿಕ ಎಲೆಕ್ನಿಕ್ ಮತ್ತು ಡೀಸೆಲ್ ಬೋಟ್ ಗಳನ್ನು ಬಳಕೆ ಮಾಡಲಾಗುತ್ತದೆ. ಬೋಟ್ ಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…