Gl
ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ ವಾಟ‌ರ್ ಮೆಟ್ರೋ.!!

ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

rachana_rai
Pashupathi
akshaya college

ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ (MWMP) ಸಮಗ್ರವಾದ ಯೋಜನಾ ವರದಿಯನ್ನು(DPR) ರೂಪಿಸಲು ನಿರ್ಧರಿಸಿದೆ. ಈ ಯೋಜನೆ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ ಬಜಾಲ್ ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ.

pashupathi

ಈ ಯೋಜನೆ ಜಾರಿಗೆ ಬಂದರೆ ಕೊಚ್ಚಿಯ ನಂತರ ಭಾರತದ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಲಿದೆ. ಈ ಯೋಜನೆಯು ಪರಿಸರ ಸ್ನೇಹಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್ ದೂರದವರೆಗೆ ಬೋಟ್ ಸಂಚರಿಸಲಿದೆ. ಬಳಿಕ ಬಜಾಲ್‌ನಿಂದ ಪ್ರಾರಂಭವಾಗಿ ಗುರುಪುರದ ಮರವೂರು ಸೇತುವೆಯವರೆಗೆ ವಿಸ್ತರಿಸಲಿದೆ. ಇದು ಸುಮಾರು 17 ಆಧುನಿಕ ಮೆಟ್ರೋ ನಿಲ್ದಾಣಗಳನ್ನು ಹೊಂದಿರಲಿದೆ. ಯೋಜನೆಯು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲಿದೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲಿದೆ ಎಂದು ಕೆಎಂಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಯೋಜನೆ ಜಾರಿಗೆ ಬಂದರೆ ಕೊಚ್ಚಿಯ ನಂತರ ಭಾರತದ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಲಿದೆ. ಈ ಯೋಜನೆಯು ಪರಿಸರ ಸ್ನೇಹಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್ ದೂರದವರೆಗೆ ಬೋಟ್ ಸಂಚರಿಸಲಿದೆ. ಬಳಿಕ ಬಜಾಲ್‌ನಿಂದ ಪ್ರಾರಂಭವಾಗಿ ಗುರುಪುರದ ಮರವೂರು ಸೇತುವೆಯವರೆಗೆ ವಿಸ್ತರಿಸಲಿದೆ. ಇದು ಸುಮಾರು 17 ಆಧುನಿಕ ಮೆಟ್ರೋ ನಿಲ್ದಾಣಗಳನ್ನು ಹೊಂದಿರಲಿದೆ. ಯೋಜನೆಯು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲಿದೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲಿದೆ ಎಂದು ಕೆಎಂಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಟ್ರಾಫಿಕ್ ಸಮಸ್ಯೆಗೆ ಪರಿಹಾರ ಮತ್ತು ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಸೋಮೇಶ್ವರ ದೇವಸ್ಥಾನ, ಉಳ್ಳಾಲ ಮತ್ತು ನವಮಂಗಳೂರು ಬಂದರು ಮುಂತಾದ ಪ್ರಮುಖ ಸ್ಥಳಗಳನ್ನು ಉದ್ದೇಶಿತ ಮಾರ್ಗದಲ್ಲಿ ಸೇರಿಸಲಾಗಿದೆ. ಈ ಯೋಜನೆಯಡಿ ಅತ್ಯಾಧುನಿಕ ಎಲೆಕ್ನಿಕ್ ಮತ್ತು ಡೀಸೆಲ್ ಬೋಟ್ ಗಳನ್ನು ಬಳಕೆ ಮಾಡಲಾಗುತ್ತದೆ. ಬೋಟ್ ಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…