ಕರಾವಳಿ

ಚಡ್ಡಿ ಗ್ಯಾಂಗ್: ದ.ಕ. ಎಸ್ಪಿ ಖಡಕ್ ಸೂಚನೆ!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

akshaya college

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದೆ ಎಂದು ತಿಳಿಸಿದ್ದಾರೆ.

ಅಂತಹ ನೈಜ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ವಿನಂತಿಸಿದ್ದಾರೆ.

ಈ ರೀತಿಯ ಹಳೆಯ ವಿಡಿಯೋ ಅಥವಾ ಫೋಟೋಗಳನ್ನು ಅವುಗಳ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…