tamanvi
ಕರಾವಳಿ

ಚಡ್ಡಿ ಗ್ಯಾಂಗ್: ದ.ಕ. ಎಸ್ಪಿ ಖಡಕ್ ಸೂಚನೆ!!

D_shiva_bhat
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದೆ ಎಂದು ತಿಳಿಸಿದ್ದಾರೆ.

ಅಂತಹ ನೈಜ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ವಿನಂತಿಸಿದ್ದಾರೆ.

ಈ ರೀತಿಯ ಹಳೆಯ ವಿಡಿಯೋ ಅಥವಾ ಫೋಟೋಗಳನ್ನು ಅವುಗಳ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…