tamanvi
ಕರಾವಳಿ

ಉಬರಡ್ಕದಲ್ಲಿ KSRTC – ಸ್ಕೂಟಿ ಡಿಕ್ಕಿ: ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

D_shiva_bhat
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

ರಚನಾ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…