ಕರಾವಳಿ

ಉಬರಡ್ಕದಲ್ಲಿ KSRTC – ಸ್ಕೂಟಿ ಡಿಕ್ಕಿ: ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

D_shiva_bhat
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

maithri

ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

ರಚನಾ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts