tamanvi
ಕರಾವಳಿ

ಪುತ್ತೂರು: ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

D_shiva_bhat
ಕರ್ನಾಟಕ ಅಂಡರ್ ವಾಟರ್ ಸ್ಪೋರ್ಟ್ಸ್ ಮತ್ತು ಫಿನ್ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜನೆಯಲ್ಲಿ ನ3 ರಂದು ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ನಡೆದ ಎರಡನೇ ಕರ್ನಾಟಕ ರಾಜ್ಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ - 2024 ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಅಂಡರ್ ವಾಟರ್ ಸ್ಪೋರ್ಟ್ಸ್ ಮತ್ತು ಫಿನ್ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜನೆಯಲ್ಲಿ ನ3 ರಂದು ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ನಡೆದ ಎರಡನೇ ಕರ್ನಾಟಕ ರಾಜ್ಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ – 2024 ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

maithri

      ಪ್ರಥಮ ವಿಜ್ಞಾನ ವಿಭಾಗದ  ಅರ್ ಅಮನ್ ರಾಜ್  ಇವರು ಬೈ – ಫಿನ್ 100ಮೀ  ಮತ್ತು 50ಮೀ ಅಪ್ನಿಯ ದಲ್ಲಿ ಚಿನ್ನ ಹಾಗೂ ಬೈ – ಫಿನ್ 200ಮೀ ಮತ್ತು ಬೈ – ಫಿನ್ 50ಮೀ ನಲ್ಲಿ ಬೆಳ್ಳಿ ಪದಕ, ದಿಗಂತ್ ವಿ ಎಸ್ ಮೊನೋ – ಫಿನ್ 100ಮೀ, ಬೈ – ಫಿನ್ 200ಮೀ ನಲ್ಲಿ ಚಿನ್ನ ಮತ್ತು 50ಮೀ ಅಪ್ನಿಯ ದಲ್ಲಿ ಬೆಳ್ಳಿ ಪದಕ, ಅನ್ವಿತ್ ರೈ ಬರಿಕೆ  ಮೊನೋ – ಫಿನ್ 50ಮೀ,  ಬೈ – ಫಿನ್ 50ಮೀ ನಲ್ಲಿ ಚಿನ್ನ ಹಾಗೂ ಮೊನೋ – ಫಿನ್ 100ಮೀ,  ಬೈ – ಫಿನ್ 100ಮೀ ನಲ್ಲಿ ಬೆಳ್ಳಿ ಪದಕ ಮತ್ತು ಪ್ರಾಧಿ ಕ್ಲಾರೆ ಪಿಂಟೋ ಮೊನೋ – ಫಿನ್ 50ಮೀ,  ಬೈ – ಫಿನ್ 50ಮೀ  ಮತ್ತು ಬೈ – ಫಿನ್ 100ಮೀ ನಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ.
       ಇವರುಗಳಿಗೆ ಪರ್ಲಡ್ಕದ ಬಾಲವನದ ಅಕ್ವೆಟಿಕ್ ಕ್ಲಬ್ ನ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ದೀಕ್ಷಿತ್ ರಾವ್ ಮತ್ತು ರೋಹಿತ್ ಪ್ರಕಾಶ್ ರವರು ತರಬೇತಿ ನೀಡಿರುತ್ತಾರೆ.
      ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…