tamanvi
ಕರಾವಳಿ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ!!

D_shiva_bhat
ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

maithri

ಮೃತಪಟ್ಟ ಬಾಣಂತಿ ಕಾರ್ಕಳದ ರಂಜಿತಾ (28) ಎಂ ತಿಳಿದು ಬಂದಿದೆ.

ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದಾಗಿ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು ಎಂದು ತಿಳಿದುಬಂದಿದೆ.

ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಟಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಮಹಿಳೆಯನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…