tamanvi
ಕರಾವಳಿ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ!!

ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಮೃತಪಟ್ಟ ಬಾಣಂತಿ ಕಾರ್ಕಳದ ರಂಜಿತಾ (28) ಎಂ ತಿಳಿದು ಬಂದಿದೆ.

ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದಾಗಿ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು ಎಂದು ತಿಳಿದುಬಂದಿದೆ.

ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಟಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಮಹಿಳೆಯನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…