Gl
ಕರಾವಳಿ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ!!

ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Pashupathi

ಮೃತಪಟ್ಟ ಬಾಣಂತಿ ಕಾರ್ಕಳದ ರಂಜಿತಾ (28) ಎಂ ತಿಳಿದು ಬಂದಿದೆ.

akshaya college

ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದಾಗಿ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು ಎಂದು ತಿಳಿದುಬಂದಿದೆ.

ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಟಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಮಹಿಳೆಯನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…