tamanvi
ಕರಾವಳಿ

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ; ಸಮಾಜ‌ಘಾತುಕ ಶಕ್ತಿಗಳನ್ನು‌ ಮಟ್ಟಹಾಕಿ: ಪೊಲೀಸ್ ಇಲಾಖೆಗೆ ಶಾಸಕರ ಸೂಚನೆ

D_shiva_bhat
ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. 

maithri

ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು‌.

ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂ‌ಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿ‌ಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿ‌ಮಟ್ಟ ಹಾಕಿ‌ಎಂದು ಸೂಚನೆ ನೀಡಿದರು.

ಈ‌ಸಂಧರ್ಭದಲ್ಲಿ‌ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್‌ಕುಂಞಿ‌ಮೊದಲಾದವರು ಉಪಸ್ಥಿತರಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…