ಪುತ್ತೂರು: ನವಂಬರ 13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಪ್ರತಿ ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗಿಡಕ್ಕೆ ಹೂವಿಟ್ಟು ಆರತಿ ಎತ್ತುವ ಮೂಲಕ ಸರಳವಾಗಿ ತುಳಸಿ ಪೂಜೆ ಮಾಡುಬೇಕೆನ್ನುವ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ ಯೋಚನೆಯ ಅನುಷ್ಠಾನ ಇಡೇರಿಕೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಾಲಯಗಳ ಸಂವರ್ದನ ಸಮಿತಿಯ ಪ್ರಮುಖರು ವಿಶೇಷ ಪ್ರಾಥನೆ ಸಲ್ಲಿಸಿದರು.
ಪುತ್ತೂರು ಮಹಾಲಿಂಗೇಶ್ವರ ದೇವಳದ ನಿಕಟಪೂರ್ವ ಅಧ್ಯಕ್ಷ, ದೇವಾಲಯಗಳ ಸಂವರ್ಧನಾ ಸಮಿತಿಯ ಮಂಗಳೂರು ವಿಭಾಗ ಪ್ರಮುಖ್ ಕೇಶವ ಭಟ್ ಮುಳಿಯ, ಪ್ರಾಂತ ಸಹ ಸೇವಾ ಪ್ರಮುಖ್ ನ. ಸೀತಾರಾಮ್ ಸುಳ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿ ಸದಸ್ಯ, ದೇವಾಲಯಗಳ ಸಂವರ್ಧನಾ ಸಮಿತಿಯ ವಿಭಾಗ ಸಂಯೋಜಕ ಪ್ರಸನ್ನ ದರ್ಬೆ, ಕೊಯಿಲ ಗ್ರಾಮದ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿಅಧ್ಯಕ್ಷ, ದೇವಲಯಗಳ ಸಂವರ್ಧನಾ ಸಮಿತಿ ಸದಸ್ಯ ಯದುಶ್ರೀ ಆನೆಗುಂಡಿ ಮೊದಲಾದವರು ಇದ್ದರು.
ಈ ಸಂದರ್ಭದಲ್ಲಿ ಮಾತಾಡಿದ ಕೇಶವ ಭಟ್ ಮುಳಿಯ, ನಮ್ಮ ಸಂಸ್ಕತಿಯ ಆಚರಣೆಗಳು ಮಾಯವಾಗುತ್ತಾ, ಪಾಶ್ಚಾತ್ಯ ಸಂಸ್ಕತಿಗಳ ಕಡೆ ಮುಖ ಮಾಡುವ ಈ ಸಂದರ್ಭಗಳಲ್ಲಿ ಹಿಂದುಗಳ ಪ್ರತಿ ಮನೆಯಲ್ಲಿ ಮಕ್ಕಳಲ್ಲಿ ಧಾರ್ಮಿಕತೆಯ ಅರಿವು ಮೂಡಿಸಲು ನಮ್ಮ ಧರ್ಮ ನಮ್ಮ ರಕ್ಷಣೆಯ ಅಡಿಯಲ್ಲಿ ಕಳೆದ ವರ್ಷ ಕಡಬ ತಾಲೂಕಿನ ಕೊಯಿಲ ಗ್ರಾಮದ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಗ್ರಾಮದ ಪ್ರತಿ ಮನೆಗಳಲ್ಲಿ ಮಕ್ಕಳಿಂದ ಶಾರದ ಪೂಜೆ ಹಾಗು ಮಾತೆಯರಿಂದ ತುಳಸಿ ಪೂಜೆ ನಡೆಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ಮನೆಗಳಲ್ಲಿ ಮಾತೆಯರಿಂದ ತುಳಸಿ ಪೂಜೆ ಜರಗಬೇಕು ಎನ್ನುವ ಅಪೇಕ್ಷೆ ನಮ್ಮದು. ಹಿಂದು ಧರ್ಮದ ಪೂಜನಿಯ ಅಸ್ಮಿತೆಗಳು ಪ್ರತೀ ಮನೆಯಲ್ಲಿ ನೆಲೆ ನಿಲ್ಲುವಂತಾಗಲಿ, ನಮ್ಮ ಧರ್ಮ ನಮ್ಮಿಂದ ರಕ್ಷಣೆ ಆಗಲಿ, ಎಲ್ಲಾ ಮನೆಯವರು ನಮ್ಮ ಯೋಜನೆಯನ್ನು ಪ್ರೋತ್ಸಾಹಿಸಬೇಕೆಂದು ದೇವರಲ್ಲಿ ಪ್ರಾಥನೆ ಸಲ್ಲಿಸಲಾಗಿದೆ ಎಂದರು.
ನ. 13ರ ಸಂಜೆ ಸರಳವಾಗಿ ತುಳಸಿ ಪೂಜೆ ಆಚರಿಸಿ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೇಳಿಕೆ ನೀಡಿದ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ
Related Posts
ಮಂಗಳೂರು – ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣಾ ವೇಳಾಪಟ್ಟಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ…
ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾಸಂಸ್ಥೆ: 4 ಪರೀಕ್ಷೆಗೆ ಗೈರು! ವಿದ್ಯಾರ್ಥಿನಿಯರ ಮನವೊಲಿಸಿ ಪರೀಕ್ಷೆ ಬರೆಸಿದ ಬಿಇಓ!
ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ…
ಪಿಲಿಕುಳ ಮೃಗಾಲಯ ತಾತ್ಕಾಲಿಕ ಬಂದ್?? ಹೈಕೋರ್ಟ್ ಮೊರೆ ಹೋದ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ!
ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿರ್ವಹಣಾ ಅವ್ಯವಸ್ಥೆ ಮತ್ತು ನಿಯಮ ಉಲ್ಲಂಘನೆಯ ಬಗ್ಗೆ ಗಂಭೀರ…
ಮೆಡಿಕಲ್ ಕಾಲೇಜು ಹಿಂದಿನ ಲಾಭಿ ಎಷ್ಟಿತ್ತು ಗೊತ್ತಾ? | ನಿಜವಾಗ್ಲೂ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಆಗುತ್ತಾ? ನಿರ್ಮಾಣದ ಯೋಜನೆ ಎಲ್ಲಿ? ಲೋಕಾರ್ಪಣೆ ಯಾವಾಗ? ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಅಶೋಕ್ ರೈ ಏನು ಹೇಳಿದ್ದಾರೆ… ಇಲ್ನೋಡಿ…
ಒಂದು ವರ್ಷ ಏಳು ತಿಂಗಳು. ಅವಿರತ ಶ್ರಮ, ಪ್ರೀ-ಬಜೆಟಲ್ಲಿ ಭಾಗಿ, ಯೋಜನೆ ನೀಡಲೇಬೇಕೆಂಬ ಹಠ… ಇದರ…
ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು
ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…
ಮಂಗಳೂರು: ಜೈಲಿನಲ್ಲಿ ಕೈದಿಗಳಿಗೆ ಫುಡ್ ಪಾಯಿಸನ್, ಹೊಟ್ಟೆ ನೋವಿನಿಂದ ಅಸ್ವಸ್ಥ!
ಜೈಲಿನಲ್ಲಿ ವಿಚಾರಣಾಧೀನ ಖೈದಿಗಳು ಅಸ್ವಸ್ಥರಾಗಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಕೇಂದ್ರ…
ಸೇತುವೆಗಳ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಉಸ್ತುವಾರಿ ಸಚಿವ ಸೂಚನೆ
ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಸೇತುವೆಗಳ ಎರಡೂ ಬದಿಗಳಲ್ಲಿ ಸಿ.ಸಿ.ಟಿ.ವಿ…
ಮಂಗಳೂರು: ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ!
ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ…
ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ
ಆಧುನಿಕ ತಂತ್ರಜ್ಞಾನದ ಕೋಚ್ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…
ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ- ಸೆಝ್’ನಿಂದ ಹೊಸ ತಪರಾಕಿ!
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…