ಪುತ್ತೂರು: ನವಂಬರ 13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಪ್ರತಿ ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗಿಡಕ್ಕೆ ಹೂವಿಟ್ಟು ಆರತಿ ಎತ್ತುವ ಮೂಲಕ ಸರಳವಾಗಿ ತುಳಸಿ ಪೂಜೆ ಮಾಡುಬೇಕೆನ್ನುವ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ ಯೋಚನೆಯ ಅನುಷ್ಠಾನ ಇಡೇರಿಕೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಾಲಯಗಳ ಸಂವರ್ದನ ಸಮಿತಿಯ ಪ್ರಮುಖರು ವಿಶೇಷ ಪ್ರಾಥನೆ ಸಲ್ಲಿಸಿದರು.
ಪುತ್ತೂರು ಮಹಾಲಿಂಗೇಶ್ವರ ದೇವಳದ ನಿಕಟಪೂರ್ವ ಅಧ್ಯಕ್ಷ, ದೇವಾಲಯಗಳ ಸಂವರ್ಧನಾ ಸಮಿತಿಯ ಮಂಗಳೂರು ವಿಭಾಗ ಪ್ರಮುಖ್ ಕೇಶವ ಭಟ್ ಮುಳಿಯ, ಪ್ರಾಂತ ಸಹ ಸೇವಾ ಪ್ರಮುಖ್ ನ. ಸೀತಾರಾಮ್ ಸುಳ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿ ಸದಸ್ಯ, ದೇವಾಲಯಗಳ ಸಂವರ್ಧನಾ ಸಮಿತಿಯ ವಿಭಾಗ ಸಂಯೋಜಕ ಪ್ರಸನ್ನ ದರ್ಬೆ, ಕೊಯಿಲ ಗ್ರಾಮದ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿಅಧ್ಯಕ್ಷ, ದೇವಲಯಗಳ ಸಂವರ್ಧನಾ ಸಮಿತಿ ಸದಸ್ಯ ಯದುಶ್ರೀ ಆನೆಗುಂಡಿ ಮೊದಲಾದವರು ಇದ್ದರು.
ಈ ಸಂದರ್ಭದಲ್ಲಿ ಮಾತಾಡಿದ ಕೇಶವ ಭಟ್ ಮುಳಿಯ, ನಮ್ಮ ಸಂಸ್ಕತಿಯ ಆಚರಣೆಗಳು ಮಾಯವಾಗುತ್ತಾ, ಪಾಶ್ಚಾತ್ಯ ಸಂಸ್ಕತಿಗಳ ಕಡೆ ಮುಖ ಮಾಡುವ ಈ ಸಂದರ್ಭಗಳಲ್ಲಿ ಹಿಂದುಗಳ ಪ್ರತಿ ಮನೆಯಲ್ಲಿ ಮಕ್ಕಳಲ್ಲಿ ಧಾರ್ಮಿಕತೆಯ ಅರಿವು ಮೂಡಿಸಲು ನಮ್ಮ ಧರ್ಮ ನಮ್ಮ ರಕ್ಷಣೆಯ ಅಡಿಯಲ್ಲಿ ಕಳೆದ ವರ್ಷ ಕಡಬ ತಾಲೂಕಿನ ಕೊಯಿಲ ಗ್ರಾಮದ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಗ್ರಾಮದ ಪ್ರತಿ ಮನೆಗಳಲ್ಲಿ ಮಕ್ಕಳಿಂದ ಶಾರದ ಪೂಜೆ ಹಾಗು ಮಾತೆಯರಿಂದ ತುಳಸಿ ಪೂಜೆ ನಡೆಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ಮನೆಗಳಲ್ಲಿ ಮಾತೆಯರಿಂದ ತುಳಸಿ ಪೂಜೆ ಜರಗಬೇಕು ಎನ್ನುವ ಅಪೇಕ್ಷೆ ನಮ್ಮದು. ಹಿಂದು ಧರ್ಮದ ಪೂಜನಿಯ ಅಸ್ಮಿತೆಗಳು ಪ್ರತೀ ಮನೆಯಲ್ಲಿ ನೆಲೆ ನಿಲ್ಲುವಂತಾಗಲಿ, ನಮ್ಮ ಧರ್ಮ ನಮ್ಮಿಂದ ರಕ್ಷಣೆ ಆಗಲಿ, ಎಲ್ಲಾ ಮನೆಯವರು ನಮ್ಮ ಯೋಜನೆಯನ್ನು ಪ್ರೋತ್ಸಾಹಿಸಬೇಕೆಂದು ದೇವರಲ್ಲಿ ಪ್ರಾಥನೆ ಸಲ್ಲಿಸಲಾಗಿದೆ ಎಂದರು.
ನ. 13ರ ಸಂಜೆ ಸರಳವಾಗಿ ತುಳಸಿ ಪೂಜೆ ಆಚರಿಸಿ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೇಳಿಕೆ ನೀಡಿದ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ
What's your reaction?
Related Posts
ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹಿಂ ಅವರ ಸಹೋದರನಿಂದ ಅಕ್ರಮ ಪೆಟ್ರೋಲ್ ಪಂಪ್!! ಲೋಕಾಯುಕ್ತಕ್ಕೆ ದೂರು ನೀಡುವ ಸಿದ್ಧತೆಯಲ್ಲಿ ಸಾರ್ವಜನಿಕರು!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಅಧಿಕಾರಿ ಇಬ್ರಾಹಿಂ ಅವರ ಸಹೋದರ…
ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ
ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ…
ಜನಾರ್ದನ ಪೂಜಾರಿಗೆ ಮತ ಹಾಕಿದವರೇ ದಫನ ಭೂಮಿಯಲ್ಲಿರುವುದು; ಪೂಜಾರಿ ಮರೆತಿರಬಹುದು: ಅಶ್ರಫ್ ಕಲ್ಲೇಗ
ಪುತ್ತೂರು: ಒಂದೊಮ್ಮೆ ವೀರೇಂದ್ರ ಹೆಗ್ಗಡೆ ಅವರನ್ನು ಅವಮಾನಿಸಿದ್ದ ಜನಾರ್ದನ ಪೂಜಾರಿ ಅವರಿಗೆ…
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು!
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ…
ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ ಇಲಾಖೆ ಕಾರ್ಯಾಚರಣೆ
ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ…
ಪುತ್ತೂರಿಗೆ ಭೇಟಿ ನೀಡಿದ ಕಲಬುರ್ಗಿ, ಕೊಪ್ಪಳ ವಿಶ್ವಕರ್ಮ ಮಠದ ಸ್ವಾಮೀಜಿಗಳು | ಯುವತಿ, ಮಗುವಿಗೆ ನ್ಯಾಯ ನೀಡಲು ಮುಖಂಡರಿಗೆ ಮನವಿ: ಕೆ.ಪಿ. ನಂಜುಂಡಿ
ಪುತ್ತೂರು: ವಿದ್ಯಾರ್ಥಿನಿ ಮಗು ಹಡೆದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ರಾವ್'ನಿಂದ ನ್ಯಾಯ…
ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್
ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…
ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…
ಬ್ರಹ್ಮಾವರ: ತಾಲೂಕು ತುಳುವ ಮಹಾಸಭೆ ಸಂಚಾಲಕಿಯಾಗಿ ಆಶಾ ಎ. ಹೆಗ್ಡೆ ಮಂದಾರ್ತಿ ನೇಮಕ
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ…
ಇಂದು (ಜೂನ್ 12) ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ!
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ.