tamanvi
ಕರಾವಳಿ

ನ: 16 ಶಾಸಕ ಅಶೋಕ್ ರೈ ಕಚೇರಿಯಲ್ಲಿ ಬೃಹತ್ ಉದ್ಯೋಗ ಮೇಳ:| 2೦೦ ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇರ ಆಯ್ಕೆ

D_shiva_bhat
ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ.16 ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ.16 ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ ನಡೆಯಲಿದ್ದು ಸುಮಾರು 200 ಮಂದಿಯನ್ನು ನೇರ ಸಂದರ್ಶನದ ಮೂಲಕ ವಿವಿಧ ಸಂಸ್ಥೆಗಳು ಆಯ್ಕೆ ಮಾಡಲಿದೆ.

maithri

ಪುತ್ತೂರಿನಲ್ಲಿರುವ ವಿದ್ಯಾವಂತ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಶಾಸಕರು ಈಗಾಗಲೇ ವಿವಿಧ ಸಂಶ್ಥೆಗಳ ಜೊತೆ ಮಾತುಕತೆ ನಡೆಸಿದ್ದರ ಪರಿಣಾಮವಾಗಿ ವಿವಿಧ ಕಂಪೆನಿಗಳು ಪುತ್ತೂರಿನಲ್ಲಿಯೇ ಸಂದರ್ಶನ ನಡೆಸಿ ತಮಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಪುತ್ತೂರಿನಲ್ಲಿ ಪ್ರಥಮ ಬಾರಿ ಎಂಬಂತೆ ಈ ರೀತಿಯ ಉದ್ಯೋಗ ಮೇಳ ನಡೆಯುತ್ತಿದ್ದು ಸ್ಥಳೀಯ ಸಂಸ್ಥೆಗಳು ಈ ಮೇಳದಲ್ಲಿ ಭಾಗವಹಿಸುತ್ತಿದೆ. ಸುಮಾರು 2೦೦ ಮಂದಿ ವಿವಿಧ ಹುದ್ದೆಗಳಿಗೆ ಕಂಪೆನಿ ಆಯ್ಕೆ ಮಾಡಿಕೊಳ್ಳಲಿದೆ.

ಹುದ್ದೆಗಳು: ಸಿವಿಲ್ ಸೈಟ್ ಮೇಲ್ವಿಚಾರಕ, ಕೃಷಿ ಮೇಲ್ವಿಚಾರಕ, ವಿಭಾಗ ಮೇಲ್ವಿಚಾರಕ, ಬಿಲ್ಲಿಂಗ್, ಇಂಜನಿಯರ್, ಇಲೆಕ್ಟ್ರಾನಿಕ್ಸ್, ಕ್ಯೂಸಿ ಚೆಕ್ಕರ್, ಸುಪರ್‌ವೈಸರ್, ಸೇಲ್ಸ್ ವಿಭಾಗ, ಫುಡ್‌ಕೋರ್ಟು, ವೆಲ್ಡರ್, ಮತ್ತು ಲೇಬರ‍್ಸ್ ಗಳನ್ನು ಆಯ್ಕೆ ಮಾಡಲಿದ್ದಾರೆ. ಉತ್ತಮ ವೇತನ ಸೌಲಭ್ಯವಿರುತ್ತದೆ.

ವಿದ್ಯಾರ್ಹತೆ : 7 ನೇ ತರಗತಿ, 10 ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಬಿ ಇ ಸಿವಿಲ್, ಬಿಎಸ್ಸಿ ಅಗ್ರಕಲ್ಚರ್ ವಿದ್ಯಾರ್ಹತೆ ಹೊಂದಿದವರು ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು ನ.16ರಂದು ಬೆಳಿಗ್ಗೆ 9.30 ರಿಂದ ಶಾಸಕ ಅಶೋಕ್ ರೈಗಳ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಉದ್ಯೋಗಾಂಕ್ಷಿಗಳು ತಮ್ಮ ಬಯೋಡಟಾದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೆಶ್ ಶೆಟ್ಟಿ ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…