tamanvi
ಕರಾವಳಿ

13 ವರ್ಷಗಳ ಹಿಂದಿನ ಪ್ರಕರಣ: ಲಾರಿ ಚಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್!!

ಮರದ ತುಂಡುಗಳನ್ನು ಲೋಡ್ ಮಾಡುತ್ತಿದ್ದ ವೇಳೆ ಚಾಲಕ ಏಕಾಏಕಿ ಲಾರಿ ಚಲಾಯಿಸಿದ ಪರಿಣಾಮ ಮರದ ತುಂಡು ಬಿದ್ದು ವ್ಯಕ್ತಿಯೋರ್ವನ ಸಾವಿಗೆ ಕಾರಣನಾದ ಚಾಲಕನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಮರದ ತುಂಡುಗಳನ್ನು ಲೋಡ್ ಮಾಡುತ್ತಿದ್ದ ವೇಳೆ ಚಾಲಕ ಏಕಾಏಕಿ ಲಾರಿ ಚಲಾಯಿಸಿದ ಪರಿಣಾಮ ಮರದ ತುಂಡು ಬಿದ್ದು ವ್ಯಕ್ತಿಯೋರ್ವನ ಸಾವಿಗೆ ಕಾರಣನಾದ ಚಾಲಕನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಆರೋಪಿ.

2011 ರಲ್ಲಿ ಕಡಬ ಜೂನಿಯರ್ ಕಾಲೇಜು ಮೈದಾನದ ಬಳಿ ಲಾರಿಯಲ್ಲಿ ಮರದ ತುಂಡುಗಳನ್ನು ಅಬ್ದುಲ್ ಕುಂಞ ಎಂಬವರು ಲಾರಿಗೆ ಲೋಡು ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಲಾರಿ ಚಾಲಕ ಅಜಾಗರುಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮರದ ತುಂಡುಗಳು ಬಿದ್ದು ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.

ಈ ಬಗ್ಗೆ ಕುಟ್ರುಪ್ಪಾಡಿ ಗ್ರಾಮದ ಅಲೆಕ್ಕಾಡಿ ಯ ಅಬ್ದುಲ್ ರಹಿಮಾನ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣಾ ಆ. ಕ್ರ. 139/2011 ಕಲಂ 304(A) ಪ್ರಕರಣ ದಾಖಲಾಗಿತ್ತು.

ಇದೀಗ ಮಾನ್ಯ ಪುತ್ತೂರು ನ್ಯಾಯಾಲಯವು ಪ್ರಕರಣದ ವಾರಂಟ್ ಆರೋಪಿ ಚಾಲಕನಿಗೆ ರವರು 6 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ₹1000/-ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…