tamanvi
ಕರಾವಳಿ

ಉಡುಪಿ: ಸಿಟಿಬಸ್ ಚಾಲಕನ ಸಂಶಯಾಸ್ಪದ ಸಾವು: ತನಿಖೆಗೆ ಆಗ್ರಹ!

D_shiva_bhat
ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಶುಕ್ರವಾರ ರಾತ್ರಿ ಮನೆ ಸಮೀಪವೇ ನಡೆದ ಘಟನೆಯನ್ನು ಮರುದಿನ ಮದ್ಯಹ್ನದ ಹೊತ್ತಿಗೆ ಮೃತದೇಹ ನೀರಿನ ಡ್ರಮ್ಮ್  ಒಳಗಿನಿಂದ ದೇಹದ ಕಾಲು ಇದ್ದು,ಮೇಲ್ಬಾಗದಲ್ಲಿ ಅರ್ಧ ತಲೆ ಕೆಳಗೆ ಹಾಕಿದ ರೀತಿಯಲ್ಲಿ ಪತ್ತೆಯಾಗಿದ್ದು,ಮೃತದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು ಸಂಶಯಕ್ಕೆ ಎಡೆಮಾಡಿದೆ.

ಆತ್ಮಹತ್ಯೆ ಎಂದು ಬಿಂಬಿಸಿರುವ ಈ ಘಟನೆ ಹಲವು ಸಂಶಯಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದರಿಂದ ಊರಿನ ಸುತ್ತುಮುತ್ತ ಭಯದ ವಾತಾವರಣ ನಿರ್ಮಾಣವಾಗಿದ್ದು ಮೃತನ ಮನೆಯವರನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡುವಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದಲಿತ ಮುಖಂಡರಾದ ವಾಸುದೇವ ಮುದ್ದೂರು,ಗಣೇಶ್ ನೆರ್ಗಿ,ಹರೀಶ್ ಸಲ್ಯಾನ್,ರವಿ ಲಕ್ಷ್ಮೀನಗರ,ಮುಂತಾದವರು ಆಗ್ರಹಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…