ಕರಾವಳಿ

ಮಲ್ಪೆ: ಬಂದರಿನಲ್ಲಿ ವ್ಯಕ್ತಿಗೆ ಚೂರಿ ಇರಿತ!!

GL
ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಲ್ಪೆ: ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

chennai-shopping
maithri

ಮಂಜುನಾಥ್‌ ಎಂಬುವವರು ಸುಮಾರು 4 ವರ್ಷದಿಂದ ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿರುತ್ತಾರೆ. ಪ್ರತಿದಿನ ಊಟ ಮುಗಿದ ಬಳಿಕ ಬಾಪುತೋಟ ದಕ್ಕೆಯಲ್ಲಿ ನಿಂತಿರುವ ಸನ್ಮಾನ್ ಬೋಟಿನಲ್ಲಿ ಮಲಗಲು ಹೋಗುತ್ತಿದ್ದು ಅದರಂತೆ ನಿನ್ನೆ ರಾತ್ರಿ ಊಟ ಮಾಡುವ ತಯಾರಿಯಲ್ಲಿರುವಾಗ ಸನ್ಮಾನ್ ಬೋಟಿನ ಕೆಲಸಗಾರ ಅನಿಲ್ ಎಂಬುವನು ಮಂಜುನಾಥ್ ಎಂಬುವವರಿಗೆ ಮದ್ಯ ಸೇವನೆ ಮಾಡಲು ಬರುವಂತೆ ತಿಳಿಸಿದ್ದು ಅದರಂತೆ ಮಂಜುನಾಥ್ ಸನ್ಮಾನ್ ಬೋಟಿಗೆ ಹೋಗಿದ್ದು, ಬೋಟಿನಲ್ಲಿ ಕೀರ್ತಿ, ಅನಿಲ್ ಮತ್ತು ಮಂಜುನಾಥ್ ಸೇರಿ ಮದ್ಯ ಸೇವನೆ ಮಾಡುತ್ತಿರುವಾಗ ರಾತ್ರಿ ಸಮಯ 10:30 ಗಂಟೆಗೆ ಅನಿಲ್‌ ಮತ್ತು ಕೀರ್ತಿ ರವರಿಗೆ ಬೋಟಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಜಗಳ ಆಗಿರುತ್ತದೆ.

ಆ ಸಮಯ ಕೀರ್ತಿ ಎಂಬಾತನು ಬಿಯರ್ ಬಾಟಲಿಯಿಂದ ಅನಿಲ್ ಎಂಬುವನ ತಲೆ ಹೊಡೆದಿರುತ್ತಾನೆ ನಂತರ ಅನಿಲ್ ಬೋಟಿನ ಸ್ಟೇರಿಂಗ್ ಬಳಿಗೆ ಓಡಿ ಹೋಗಿ ಚಾಕುವನ್ನು ತಂದಿದ್ದು ಅಷ್ಟರಲ್ಲಿ ಕೀರ್ತಿ ಎಂಬಾತನು ಬೋಟಿನಿಂದ ಓಡಿ ಹೋಗಿರುತ್ತಾನೆ ಆ ಸಮಯ ಅನಿಲ್ ಚಾಕು ಸಮೇತ ಬಂದವನೆ ಮಂಜುನಾಥ್ ಅವರನ್ನು ಕೊಲ್ಲುವ ಉದ್ದೇಶದಿಂದ ಚಾಕುವನ್ನು ಕುತ್ತಿಗೆಯ ಎಡ ಭಾಗಕ್ಕೆ ಹಾಕಿರುತ್ತಾನೆ ಅವರು ಕೂಡಲೇ ಬಲಕೈನಿಂದ ಚಾಕು ಹಿಡಿದು ತಪ್ಪಿಸಿಕೊಂಡಿದ್ದು ಇದರಿಂದ ಕುತ್ತಿಗೆಯ ಎಡಭಾಗಕ್ಕೆ ಮತ್ತು ಬಲಕೈ ಹೆಬ್ಬರಳು ಹಾಗೂ ತೋರು ಬೆರಳಿನ ಮದ್ಯ ಭಾಗಕ್ಕೆ ರಕ್ತ ಗಾಯವಾಗಿರುತ್ತದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts