tamanvi
ಕರಾವಳಿ

ಮಲ್ಪೆ: ಬಂದರಿನಲ್ಲಿ ವ್ಯಕ್ತಿಗೆ ಚೂರಿ ಇರಿತ!!

D_shiva_bhat
ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಲ್ಪೆ: ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

maithri

ಮಂಜುನಾಥ್‌ ಎಂಬುವವರು ಸುಮಾರು 4 ವರ್ಷದಿಂದ ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿರುತ್ತಾರೆ. ಪ್ರತಿದಿನ ಊಟ ಮುಗಿದ ಬಳಿಕ ಬಾಪುತೋಟ ದಕ್ಕೆಯಲ್ಲಿ ನಿಂತಿರುವ ಸನ್ಮಾನ್ ಬೋಟಿನಲ್ಲಿ ಮಲಗಲು ಹೋಗುತ್ತಿದ್ದು ಅದರಂತೆ ನಿನ್ನೆ ರಾತ್ರಿ ಊಟ ಮಾಡುವ ತಯಾರಿಯಲ್ಲಿರುವಾಗ ಸನ್ಮಾನ್ ಬೋಟಿನ ಕೆಲಸಗಾರ ಅನಿಲ್ ಎಂಬುವನು ಮಂಜುನಾಥ್ ಎಂಬುವವರಿಗೆ ಮದ್ಯ ಸೇವನೆ ಮಾಡಲು ಬರುವಂತೆ ತಿಳಿಸಿದ್ದು ಅದರಂತೆ ಮಂಜುನಾಥ್ ಸನ್ಮಾನ್ ಬೋಟಿಗೆ ಹೋಗಿದ್ದು, ಬೋಟಿನಲ್ಲಿ ಕೀರ್ತಿ, ಅನಿಲ್ ಮತ್ತು ಮಂಜುನಾಥ್ ಸೇರಿ ಮದ್ಯ ಸೇವನೆ ಮಾಡುತ್ತಿರುವಾಗ ರಾತ್ರಿ ಸಮಯ 10:30 ಗಂಟೆಗೆ ಅನಿಲ್‌ ಮತ್ತು ಕೀರ್ತಿ ರವರಿಗೆ ಬೋಟಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಜಗಳ ಆಗಿರುತ್ತದೆ.

ಆ ಸಮಯ ಕೀರ್ತಿ ಎಂಬಾತನು ಬಿಯರ್ ಬಾಟಲಿಯಿಂದ ಅನಿಲ್ ಎಂಬುವನ ತಲೆ ಹೊಡೆದಿರುತ್ತಾನೆ ನಂತರ ಅನಿಲ್ ಬೋಟಿನ ಸ್ಟೇರಿಂಗ್ ಬಳಿಗೆ ಓಡಿ ಹೋಗಿ ಚಾಕುವನ್ನು ತಂದಿದ್ದು ಅಷ್ಟರಲ್ಲಿ ಕೀರ್ತಿ ಎಂಬಾತನು ಬೋಟಿನಿಂದ ಓಡಿ ಹೋಗಿರುತ್ತಾನೆ ಆ ಸಮಯ ಅನಿಲ್ ಚಾಕು ಸಮೇತ ಬಂದವನೆ ಮಂಜುನಾಥ್ ಅವರನ್ನು ಕೊಲ್ಲುವ ಉದ್ದೇಶದಿಂದ ಚಾಕುವನ್ನು ಕುತ್ತಿಗೆಯ ಎಡ ಭಾಗಕ್ಕೆ ಹಾಕಿರುತ್ತಾನೆ ಅವರು ಕೂಡಲೇ ಬಲಕೈನಿಂದ ಚಾಕು ಹಿಡಿದು ತಪ್ಪಿಸಿಕೊಂಡಿದ್ದು ಇದರಿಂದ ಕುತ್ತಿಗೆಯ ಎಡಭಾಗಕ್ಕೆ ಮತ್ತು ಬಲಕೈ ಹೆಬ್ಬರಳು ಹಾಗೂ ತೋರು ಬೆರಳಿನ ಮದ್ಯ ಭಾಗಕ್ಕೆ ರಕ್ತ ಗಾಯವಾಗಿರುತ್ತದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…