ಕರಾವಳಿ

ಕಾಸರಗೋಡು: ಪೊಲೀಸ್ ಪತ್ನಿಯನ್ನು ಅಟ್ಟಾಡಿಸಿ ಕೊಲೆಗೈದ ಪತಿ!! ತಡೆಯಲು ಬಂದ ಮಾವನಿಗೂ ಕತ್ತಿಯೇಟು!!

ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ  ನಡೆದಿದೆ.!!

ಈ ಸುದ್ದಿಯನ್ನು ಶೇರ್ ಮಾಡಿ

ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ  ನಡೆದಿದೆ.

akshaya college

ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್‌ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು ಬಂದ ಆಕೆಯ ತಂದೆ ವಾಸು ಎಂಬವರ ಕೊರಳು, ಹೊಟ್ಟೆಗೆ ಕತ್ತಿ ಇರಿತ,ಕಡಿತಗಳ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗುರುವಾರ (ನ.21) ಮುಸ್ಸಂಜೆ ಈ ದುಷ್ಕೃತ್ಯ ನಡೆದಿದ್ದು, ಆರೋಪಿ ರಾಜೇಶ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

ಪತಿ-ಪತ್ನಿಯರಾದ ರಾಜೇಶ ಮತ್ತು ದಿವ್ಯಶ್ರೀ ಕಳೆದ ಕೆಲ ಸಮಯಗಳಿಂದ ಒಟ್ಟಿಗೆ ಬದುಕುತ್ತಿರಲಿಲ್ಲ. ಅವರ ದಾಂಪತ್ಯದಲ್ಲಿ ಸಮಸ್ಯೆಗಳಿದ್ದ ಕಾರಣ ಈರ್ವರೂ ಬೇರೆಯೇ ವಾಸಿಸುತ್ತಿದ್ದರು. ಗುರುವಾರ ಸಂಜೆ ಪತ್ನಿ ಮನೆಯಲ್ಲಿದ್ದಾಳೆಂದು ತಿಳಿದೇ ಬಂದ ಆರೋಪಿ ಆಕೆಯನ್ನು ಆಕ್ರಮಿಸಿ, ಓಡಿಸಿ ಕೊಲೆಗೈದನೆಂದೂ, ಈ ವೇಳೆ ತಡೆಯಲು ಬಂದ ಮಾವನನ್ನೂ ಆಕ್ರಮಿಸಿ ಕೊಲೆಗೆತ್ನಿಸಿದನೆಂದೂ ಮಾಹಿತಿ ಲಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೃತ ಪೋಲೀಸ್ ಉದ್ಯೋಗಿ ದಿವ್ಯಶ್ರೀ ಯ ಪತಿ ರಾಜೇಶನನ್ನು ಪೋಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯಾದ ಕೊಲೆ ಕಾರಣದ ವಿವರ ಬೆಳಕಿಗೆ ಬರಬೇಕಷ್ಟೇ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…