tamanvi
ಕರಾವಳಿ

ಕಾಸರಗೋಡು: ಪೊಲೀಸ್ ಪತ್ನಿಯನ್ನು ಅಟ್ಟಾಡಿಸಿ ಕೊಲೆಗೈದ ಪತಿ!! ತಡೆಯಲು ಬಂದ ಮಾವನಿಗೂ ಕತ್ತಿಯೇಟು!!

D_shiva_bhat
ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ  ನಡೆದಿದೆ.!!

ಈ ಸುದ್ದಿಯನ್ನು ಶೇರ್ ಮಾಡಿ

ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ  ನಡೆದಿದೆ.

maithri

ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್‌ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು ಬಂದ ಆಕೆಯ ತಂದೆ ವಾಸು ಎಂಬವರ ಕೊರಳು, ಹೊಟ್ಟೆಗೆ ಕತ್ತಿ ಇರಿತ,ಕಡಿತಗಳ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗುರುವಾರ (ನ.21) ಮುಸ್ಸಂಜೆ ಈ ದುಷ್ಕೃತ್ಯ ನಡೆದಿದ್ದು, ಆರೋಪಿ ರಾಜೇಶ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

ಪತಿ-ಪತ್ನಿಯರಾದ ರಾಜೇಶ ಮತ್ತು ದಿವ್ಯಶ್ರೀ ಕಳೆದ ಕೆಲ ಸಮಯಗಳಿಂದ ಒಟ್ಟಿಗೆ ಬದುಕುತ್ತಿರಲಿಲ್ಲ. ಅವರ ದಾಂಪತ್ಯದಲ್ಲಿ ಸಮಸ್ಯೆಗಳಿದ್ದ ಕಾರಣ ಈರ್ವರೂ ಬೇರೆಯೇ ವಾಸಿಸುತ್ತಿದ್ದರು. ಗುರುವಾರ ಸಂಜೆ ಪತ್ನಿ ಮನೆಯಲ್ಲಿದ್ದಾಳೆಂದು ತಿಳಿದೇ ಬಂದ ಆರೋಪಿ ಆಕೆಯನ್ನು ಆಕ್ರಮಿಸಿ, ಓಡಿಸಿ ಕೊಲೆಗೈದನೆಂದೂ, ಈ ವೇಳೆ ತಡೆಯಲು ಬಂದ ಮಾವನನ್ನೂ ಆಕ್ರಮಿಸಿ ಕೊಲೆಗೆತ್ನಿಸಿದನೆಂದೂ ಮಾಹಿತಿ ಲಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೃತ ಪೋಲೀಸ್ ಉದ್ಯೋಗಿ ದಿವ್ಯಶ್ರೀ ಯ ಪತಿ ರಾಜೇಶನನ್ನು ಪೋಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯಾದ ಕೊಲೆ ಕಾರಣದ ವಿವರ ಬೆಳಕಿಗೆ ಬರಬೇಕಷ್ಟೇ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…