Gl harusha
ಕರಾವಳಿ

ಮಂಗಳೂರು: ಗಣಿ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ!! ಅಧಿಕಾರಿಣಿ ಬಳಿ ಹನ್ನೊಂದು ಕೋಟಿ ಆಸ್ತಿ ಪತ್ತೆ!!

ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆಯಾಡಿದ್ದಾರೆ. ಭ್ರಷ್ಟಚಾರದ ಆರೋಪ ಹೊತ್ತಿದ್ದ ಅಧಿಕಾರಿಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಾಯುಕ್ತ ಟೀಂಗೆ ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಚಿನ್ನದ ಖಜಾನೆ ಸಿಕ್ಕಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಅವರ ಮನೆ, ಕಛೇರಿಗೂ ದಾಳಿ ಮಾಡಿದ್ದಾರೆ. ಈ ವೇಳೆ ಅಪಾರ ಪ್ರಮಾಣ ಸೊತ್ತು ಪತ್ತೆಯಾಗಿದೆ.

ಮಂಗಳೂರಿನ ಹಿರಿಯ ಭೂ ವಿಜ್ಞಾನಿ ಎಂ.ಸಿ.ಕೃಷ್ಣವೇಣಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಲೋಕಾಯುಕ್ತ ತಂಡ ಶೋಧ ನಡೆಸಿದೆ.

ಇವರ ಬಳಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ 3 ನಿವೇಶನ ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್, ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ, 26 ಎಕರೆ ಕೃಷಿ ಜಮೀನು ಇದೆ. ಎಲ್ಲಾ ಸೇರಿ ಒಟ್ಟು ಮೌಲ್ಯ10 ಕೋಟಿ 41 ಲಕ್ಷ 38 ಸಾವಿರ 286 ರೂಪಾಯಿ ಇದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ 56 ಸಾವಿರದ 450 ರೂಪಾಯಿ ನಗದು, 66 ಲಕ್ಷ 71 ಸಾವಿರದ 445 ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳು, 60 ಲಕ್ಷ ರೂಪಾಯಿ ಬೆಲೆಬಾಳುವ ವಾಹನಗಳು, 24 ಲಕ್ಷ 40 ಸಾವಿರ ರೂಪಾಯಿ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.

ಈ ಎಲ್ಲಾ ಸೇರಿ ಒಟ್ಟು ಮೌಲ್ಯ 1,51, 67,895 ರೂಪಾಯಿ ಇದ್ದು, ಸ್ಥಿರಾಸ್ತಿ ಹಾಗೂ ಚರಾಸ್ಥಿ ಸೇರಿ ಒಟ್ಟು ಮೌಲ್ಯ 11,93,06,181 ರೂಪಾಯಿ ಇದೆ. ಇದನ್ನೆಲ್ಲಾ ಕಂಡು ಲೋಕಾಯುಕ್ತ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…