Gl harusha
ಕರಾವಳಿ

ಇಬ್ರಾಹಿಂ ಬಾತಿಷಾ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕ

ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.
ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕವಾಗಿದ್ದಾರೆ.

srk ladders
Pashupathi
Muliya

ಇವರನ್ನು ಮಂಗಳೂರು 7ನೇ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಳಿಸಿ ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ನಿರ್ದೇಶಕರಾದ ಅಂಜಲಿ ದೇವಿಯವರು ಆದೇಶಿಸಿದ್ದಾರೆ.

ಪ್ರಸ್ತುತ ಹಿರಿಯ ನ್ಯಾಯವಾದಿ ಕೆ.ಎಂ.ಸಿದ್ದೀಕ್ ಅವರ ಕಚೇರಿಯಲ್ಲಿ ಕಿರಿಯ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿರುವ ಇಬ್ರಾಹಿಂ ಬಾತಿಷಾ ಯು.ಕೆ.ರವರು ಉಪ್ಪಿನಂಗಡಿಯ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ತಾಲೂಕು ಬೋರ್ಡ್ ಸದಸ್ಯ ಯು.ಕೆ.ಅಯ್ಯಬ್ ಮತ್ತು ಆಯಿಷಾ ದಂಪತಿಯ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…