tamanvi
ಕರಾವಳಿ

ಇಬ್ರಾಹಿಂ ಬಾತಿಷಾ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕ

D_shiva_bhat
ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.
ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕವಾಗಿದ್ದಾರೆ.

maithri

ಇವರನ್ನು ಮಂಗಳೂರು 7ನೇ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಳಿಸಿ ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ನಿರ್ದೇಶಕರಾದ ಅಂಜಲಿ ದೇವಿಯವರು ಆದೇಶಿಸಿದ್ದಾರೆ.

ಪ್ರಸ್ತುತ ಹಿರಿಯ ನ್ಯಾಯವಾದಿ ಕೆ.ಎಂ.ಸಿದ್ದೀಕ್ ಅವರ ಕಚೇರಿಯಲ್ಲಿ ಕಿರಿಯ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿರುವ ಇಬ್ರಾಹಿಂ ಬಾತಿಷಾ ಯು.ಕೆ.ರವರು ಉಪ್ಪಿನಂಗಡಿಯ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ತಾಲೂಕು ಬೋರ್ಡ್ ಸದಸ್ಯ ಯು.ಕೆ.ಅಯ್ಯಬ್ ಮತ್ತು ಆಯಿಷಾ ದಂಪತಿಯ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…