tamanvi
ಕರಾವಳಿ

ಪುತ್ತೂರು ಬಸ್‌ನಿಲ್ದಾಣ: ತಿರುವು ತೆರವಿಗೆ ಶಾಸಕರ ಸೂಚನೆ

ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ತೆರವಿನ ಬಳಿಕ ಸರಕಾರಿ ವಸತಿಗೃಹ ಇದ್ದು ಇದರ ಆವರಣಗೋಡೆ ಬಳಿ ಇರುವ ಮಣ್ಣಿನ‌ದಿಬ್ಬಗಳನ್ನು ತೆರವು ಮಾಡಿ ರಸ್ತೆ ಅಗಲೀಕರಣ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮಣ್ಣಿನದ ದಿಬ್ಬ ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಈ ರಸ್ತೆ ಅಗಲ ಕಡಿಮೆಯಾಗಿದ್ದು ಸುಳ್ಯ ಕಡೆಯಿಂದ ಬರುವ ಕೆಎಸ್ ಆರ್ ಟಿ ಸಿ ಬಸ್ಸುಗಳು ಈ ಮೂಲಕವೇ ನಿಲ್ದಾಣ ಪ್ರವೇಶ ಮಾಡುತ್ತಿದೆ. ರಸ್ತೆ ಅಗಲ ಕಿರಿದಾಗಿರುವ ಕಾರಣ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ತಕ್ಷಣ ಕ್ರಮಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಸ್ಥಳೀಯ ರಿಕ್ಷಾ ಚಾಲಕರು, ಸಾರ್ವಜನಿಕರು ರಸ್ತೆ ಅಗಲೀಕರಣ ಮಾಡುವಂತೆ ಮನವಿಯನ್ನು‌ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…