tamanvi
ಕರಾವಳಿ

ಪುತ್ತೂರು ಬಸ್‌ನಿಲ್ದಾಣ: ತಿರುವು ತೆರವಿಗೆ ಶಾಸಕರ ಸೂಚನೆ

GL
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ತೆರವಿನ ಬಳಿಕ ಸರಕಾರಿ ವಸತಿಗೃಹ ಇದ್ದು ಇದರ ಆವರಣಗೋಡೆ ಬಳಿ ಇರುವ ಮಣ್ಣಿನ‌ದಿಬ್ಬಗಳನ್ನು ತೆರವು ಮಾಡಿ ರಸ್ತೆ ಅಗಲೀಕರಣ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮಣ್ಣಿನದ ದಿಬ್ಬ ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಈ ರಸ್ತೆ ಅಗಲ ಕಡಿಮೆಯಾಗಿದ್ದು ಸುಳ್ಯ ಕಡೆಯಿಂದ ಬರುವ ಕೆಎಸ್ ಆರ್ ಟಿ ಸಿ ಬಸ್ಸುಗಳು ಈ ಮೂಲಕವೇ ನಿಲ್ದಾಣ ಪ್ರವೇಶ ಮಾಡುತ್ತಿದೆ. ರಸ್ತೆ ಅಗಲ ಕಿರಿದಾಗಿರುವ ಕಾರಣ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ತಕ್ಷಣ ಕ್ರಮಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಸ್ಥಳೀಯ ರಿಕ್ಷಾ ಚಾಲಕರು, ಸಾರ್ವಜನಿಕರು ರಸ್ತೆ ಅಗಲೀಕರಣ ಮಾಡುವಂತೆ ಮನವಿಯನ್ನು‌ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…