tamanvi
ಕರಾವಳಿ

ನ. 28-30: ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ

D_shiva_bhat
ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ‌ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ‌ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ ಗಾಯನ” ಕಾರ್ಯಕ್ರಮ, 7 ಗಂಟೆಯಿಂದ ಕೊಂಬೆಟ್ಟು ಪ್ರೌಢಶಾಲೆಯ ನಡೆನುಡಿ ಮಕ್ಕಳ ಸಾಂಗತ್ಯ ತಂಡದಿಂದ ಐಕೆ ಬೊಳುವಾರು ನಿರ್ದೇಶನದಲ್ಲಿ “ಕತ್ತೆ&ದೆವ್ವ” ನಾಟಕ ಪ್ರದರ್ಶನಗೊಳ್ಳಲಿದೆ.
ನ.30ರ ಶನಿವಾರ ಸಂಜೆ 6.30ಕ್ಕೆ ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಶಿವಗಿರಿ ಕಲ್ಲಡ್ಕ ನಿರ್ದೇಶನದ “ಬದುಕಿನ ಬೆಳಕು” ನಾಟಕ ಹಾಗೂ 7 ರಿಂದ ಮಾಣಿ‌ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ‌ ಶಾಲೆಯ ವಿದ್ಯಾರ್ಥಿಗಳಿಂದ ಮೌನೇಶ ವಿಶ್ವಕರ್ಮ‌ ನಿರ್ದೇಶನದ “ಯಂತ್ರಯಾನ” ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ 8 ಗಂಟೆಗೆ ರೋಟರಿ‌ ಪುತ್ತೂರು ಎಲೈಟ್ ಸದಸ್ಯರಿಂದ‌ ಮೌನೇಶ ವಿಶ್ವಕರ್ಮ‌ ನಿರ್ದೇಶನದ “ಓ ಮುನ್ನಾ” ನಾಟಕ ಪ್ರದರ್ಶನವಾಗಲಿದೆ. ರಂಗಾಸಕ್ತರು ಈ ನಾಟಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ‌ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ರಂಗಕರ್ಮಿ ಐಕೆ ಬೊಳುವಾರು, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ‌ ವಿನಂತಿಸಿದ್ದಾರೆ.

maithri

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…