Gl
ಕರಾವಳಿ

ಕಾರ್ಕಳ: ಸಾವಿನಲ್ಲೂ ಒಂದಾದ ಜೂಲಿಯಾನಾ ಟೀಚರ್ ದಂಪತಿಗಳು

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. 

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ :(Karkala) ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಜೂಲಿಯಾನ ಟೀಚರ್ ನಿಧನರಾಗಿದ್ದ ಸುದ್ದಿ ಅಪಾರ ವಿದ್ಯಾರ್ಥಿ ಬಳಗವನ್ನು ನೋವಿಗೀಡು ಮಾಡಿತ್ತು. ಆದರೆ ಈ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಘಟನೆ ನಡೆದಿದ್ದು ಇವರ ಪತಿ, ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸ (62)ಅವರು ಅಸೌಖ್ಯದಿಂದ ನ.29ರಂದು ನಿಧನ ಹೊಂದಿದ್ದಾರೆ.

Pashupathi

ಅಂದಹಾಗೆ ಪತ್ನಿಯ ಸಾವಿನಿಂದ ಆಘಾತಕ್ಕೊಳಗಾದ ಪತಿ ಲಾರೆನ್ಸ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇವರೂ ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳೀಯ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಲಾರೆನ್ಸ್ ಡೆಸಾ, ಸ್ಥಳೀಯ ಲಯನ್ಸ್ ಹಾಗೂ ಇನ್ನಿತರ ಸಂಘಟನೆಗಳಲ್ಲಿ ಸಕ್ರೀಯ ಪದಾಧಿಕಾರಿಯಾಗಿ, ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

akshaya college

ಸಾವಿನಲ್ಲೂ ಗಂಡ, ಹೆಂಡತಿ ಒಂದಾಗಿದ್ದಾರೆ. ಅವರು ಮೃತರು ಪುತ್ರ, ಪುತ್ರಿ ಹಾಗೂ ಅಪಾರು ಬಂಧು ವರ್ಗವನ್ನು ಅಗಲಿದ್ದಾರೆ. ಇವರಿಬ್ಬರ ಅಗಲಿಕೆಗೆ ಕಾರ್ಕಳದ ಗಣ್ಯರು, ರಾಜಕೀಯ ಮುಖಂಡರು, ಧರ್ಮ ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…