ಕರಾವಳಿ

ಕಾರ್ಕಳ: ಸಾವಿನಲ್ಲೂ ಒಂದಾದ ಜೂಲಿಯಾನಾ ಟೀಚರ್ ದಂಪತಿಗಳು

GL
ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. 

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ :(Karkala) ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಜೂಲಿಯಾನ ಟೀಚರ್ ನಿಧನರಾಗಿದ್ದ ಸುದ್ದಿ ಅಪಾರ ವಿದ್ಯಾರ್ಥಿ ಬಳಗವನ್ನು ನೋವಿಗೀಡು ಮಾಡಿತ್ತು. ಆದರೆ ಈ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಘಟನೆ ನಡೆದಿದ್ದು ಇವರ ಪತಿ, ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸ (62)ಅವರು ಅಸೌಖ್ಯದಿಂದ ನ.29ರಂದು ನಿಧನ ಹೊಂದಿದ್ದಾರೆ.

chennai-shopping
maithri

ಅಂದಹಾಗೆ ಪತ್ನಿಯ ಸಾವಿನಿಂದ ಆಘಾತಕ್ಕೊಳಗಾದ ಪತಿ ಲಾರೆನ್ಸ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇವರೂ ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳೀಯ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಲಾರೆನ್ಸ್ ಡೆಸಾ, ಸ್ಥಳೀಯ ಲಯನ್ಸ್ ಹಾಗೂ ಇನ್ನಿತರ ಸಂಘಟನೆಗಳಲ್ಲಿ ಸಕ್ರೀಯ ಪದಾಧಿಕಾರಿಯಾಗಿ, ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಸಾವಿನಲ್ಲೂ ಗಂಡ, ಹೆಂಡತಿ ಒಂದಾಗಿದ್ದಾರೆ. ಅವರು ಮೃತರು ಪುತ್ರ, ಪುತ್ರಿ ಹಾಗೂ ಅಪಾರು ಬಂಧು ವರ್ಗವನ್ನು ಅಗಲಿದ್ದಾರೆ. ಇವರಿಬ್ಬರ ಅಗಲಿಕೆಗೆ ಕಾರ್ಕಳದ ಗಣ್ಯರು, ರಾಜಕೀಯ ಮುಖಂಡರು, ಧರ್ಮ ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…