tamanvi
ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಮನೆ ಹಸ್ತಾಂತರ

D_shiva_bhat
ದಕ್ಷಿಣ ಕನ್ನಡ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್  ವತಿಯಿಂದ ಮರ್ಹೂಂ ರಮಳಾನ್  ಅಝ್ಹರಿಯವರ ಕುಟುಂಬಕ್ಕೆ ಕಾಜೂರು ಪೆರ್ದಾಡಿ ನಲ್ಲಿ ಪುನರ್ ನಿರ್ಮಾಣ ಗೊಂಡ ಮನೆ ಕೀ ಹಸ್ತಾಂತರ ನೇತೃತ್ವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನೆರವೇರಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್  ವತಿಯಿಂದ ಮರ್ಹೂಂ ರಮಳಾನ್  ಅಝ್ಹರಿಯವರ ಕುಟುಂಬಕ್ಕೆ ಕಾಜೂರು ಪೆರ್ದಾಡಿ ನಲ್ಲಿ ಪುನರ್ ನಿರ್ಮಾಣ ಗೊಂಡ ಮನೆ ಕೀ ಹಸ್ತಾಂತರ ನೇತೃತ್ವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನೆರವೇರಿಸಿದರು.

maithri

ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಶಂಸುದ್ದೀನ್ ದಾರಿಮಿ ಪಮ್ಮಲೆ ಮಾಡನ್ನೂರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮಕ್ಕೆ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಕಾರ್ಯದರ್ಶಿ ಮುಹಮ್ಮದ್ ನವವಿ ಮುಂಡೋಲೆ ಸುಳ್ಯ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಚ್ಚುಕಟ್ಟಾಗಿ ನಿರ್ಮಿಸಿ ಕೊಟ್ಟ ಇಂಜಿನಿಯರ್ ಮುಹಮ್ಮದ್ ತ್ವಾಹಿರ್ ಬಂಗೇರಕಟ್ಟೆ ಇವರಿಗೆ ಸನ್ಮಾನಿಸಲಾಯಿತು.

ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಉಪಾಧ್ಯಕ್ಷರಾದ ಅಶ್ರಫ್ ಫೈಝಿ ಬೆಳ್ತಂಗಡಿ, SKSBV ಜಿಲ್ಲಾ ಕನ್ವೀನರ್ ಅಶ್ರಫ್ ಹನೀಫಿ ಕರಾಯ, ಮುಹಮ್ಮದಲೀ ದಾರಿಮಿ ಕುಕ್ಕಾಜೆ, SKSSF ಈಸ್ಟ್ ಜಿಲ್ಲಾ ಕಾರ್ಯದರ್ಶಿ ಹಾರಿಸ್ ಕೌಸರಿ, ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಕೌನ್ಸಿಲ್ ಅಬ್ದುಲ್ ರಝಾಕ್ ಮದನಿ ಸುರತ್ಕಲ್ ರೇಂಜ್, ರಫೀಕ್ ದಾರಿಮಿ ಮೂಡುಬಿದ್ರೆ ರೇಂಜ್, ಫಳುಲುದ್ದೀನ್ ಮುಸ್ಲಿಯಾರ್ ಮಂಗಳೂರು ರೇಂಜ್, ನಿಸಾರ್ ಮುಸ್ಲಿಯಾರ್ ಬಂಟ್ವಾಳ ರೇಂಜ್, ಕೆ.ಎಂ. ಸಿದ್ದೀಕ್ ಫೈಝಿ ಕರಾಯ, ಬೆಳ್ತಂಗಡಿ ರೇಂಜ್ ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಶ್ಶಾಫಿ, ಹಮೀದ್ ಫೈಝಿ ಗುರುಪುರ, ಹಾಗೂ ಬೆಳ್ತಂಗಡಿ ರೇಂಜ್ ಅಧ್ಯಾಪಕರು, ಕಾಜೂರು ಪೆರ್ದಾಡಿ ಅಜ್ಮೀರ್ ಖಾಜ ಜುಮಾ ಮಸೀದಿಯ ಆಡಳಿತ ಮಂಡಳಿಯ ಸದಸ್ಯರು ಊರಿನ ನೇತಾರರು ಬಾಗವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…