ಕರಾವಳಿ

ಹೆಲ್ಮೆಟ್ ನಿಂದ ಬಸ್ಸಿನ ಗಾಜು ಒಡೆದು ಪರಾರಿಯಾದ ಸವಾರ!!

ಸ್ಕೂಟರ್ ಸವಾರನೋರ್ವ ಹೆಲ್ಕೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸ್ಕೂಟರ್ ಸವಾರನೋರ್ವ ಹೆಲ್ಕೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.

maithri

ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ ಬಸ್‌ಗೆ ಸ್ಕೂಟರ್ ಅಡ್ಡ ಇಟ್ಟು ತನ್ನಲ್ಲಿದ್ದ ಹೆಲ್ಕೆಟ್‌ನಿಂದ ಬಸ್‌ನ ಕಿಟಕಿ ಹಾಗೂ ಮುಂಭಾಗದ ಗಾಜು ಒಡೆದಿದ್ದಾನೆ. ಇದರಿಂದ ಚಾಲಕನ ಕೈಗೆ ಗಾಯವಾಗಿದೆ. ಸವಾರ ಪರಾರಿಯಾಗಿದ್ದಾನೆ.

ಚಾಲಕ ಅರುಣ್ ನೀಡಿದ ದೂರಿನಂತೆ ಕಂಕನಾಡಿ ಪೊಲೀಸರು ಸವಾರನ ವಿರುದ್ಧ ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…