ಪುತ್ತೂರು: ಸಿಡಿಲು ಬಡಿದು ಕೆಯ್ಯೂರು ನಿವಾಸಿ ನಾರಾಯಣ (45) ಮೃತಪಟ್ಟಿದ್ದಾರೆ
ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಟ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.
























