Gl
ಕರಾವಳಿ

ಕಡಬ : ನಾಪತ್ತೆಯಾಗಿದ್ದ ಸಂದೀಪ್ ಗೌಡನ ಮೃತದೇಹ ಪತ್ತೆ! ಪರಿಚಿತ ಯುವಕನಿಂದಲೆ ಹತ್ಯೆ;  ತನಿಖೆಯ ಸುತ್ತ ಮೂಡಿದೆ ಹಲವು ಅನುಮಾನ

ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ : ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತ ಯುವಕನೇ ಆತನನ್ನು ಹತ್ಯೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಕಾಡಿನ ಮಧ್ಯೆ ಸುಟ್ಟು ಹಾಕಿರುವುದಾಗಿ ತಿಳಿದು ಬಂದಿದೆ

Pashupathi

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೊಲೆಯಾದ ಯುವಕ. ಕಡಬ ತಾಲೂಕಿನ ನೆಟ್ಟಣ ಚೆಂಡೆಹಿತ್ತಿಲು ನಿವಾಸಿ ಕುಶಾಲಪ್ಪ ಎಂಬವರ ಪುತ್ರ ಪ್ರತಿಕ್ ಎಂಬಾತನನ್ನು ಕೊಲೆ ಆರೋಪದಲ್ಲಿ ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

akshaya college

ಮೂಲಗಳ ಪ್ರಕಾರ ಪೊಲೀಸ್ ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹತ್ಯೆ ನಡೆಸಿದ ಬಳಿಕ ಮೃತದೇಹವನ್ನು ಕಾಡಿನಲ್ಲಿ ಪೆಟ್ರೋಲ್ ಸುರಿದು ಸುಟ್ಟಿರುವುದಾಗಿ ಬಾಯ್ದಿಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೇ ಕಾಡಿನಲ್ಲಿ ಮರವೊಂದರ ಕೆಳಗಡೆ ಶವವನ್ನು ಬೀಸಾಡಿರುವುದನ್ನು ಪ್ರತಿಕ್ ವಿಚಾರಣೆ ಸಂದರ್ಭ ತಿಳಿಸಿದ್ದಾನೆ. ಹೀಗಾಗಿ  ಪೊಲೀಸರು ಶವವನ್ನು ಪತ್ತೆ ಹಚ್ಚುವ ವೇಳೆ ಅತನನ್ನು ಕರೆದುಕೊಂಡು ಬಂದಿದ್ದರು ಆತ ತಿಳಿಸಿದ ಸ್ಥಳದಲ್ಲೆ ಸಂದೀಪ್ ಶವ ದೊರೆತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…