tamanvi
ಕರಾವಳಿ

ಕಡಬ : ನಾಪತ್ತೆಯಾಗಿದ್ದ ಸಂದೀಪ್ ಗೌಡನ ಮೃತದೇಹ ಪತ್ತೆ! ಪರಿಚಿತ ಯುವಕನಿಂದಲೆ ಹತ್ಯೆ;  ತನಿಖೆಯ ಸುತ್ತ ಮೂಡಿದೆ ಹಲವು ಅನುಮಾನ

D_shiva_bhat
ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ : ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತ ಯುವಕನೇ ಆತನನ್ನು ಹತ್ಯೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಕಾಡಿನ ಮಧ್ಯೆ ಸುಟ್ಟು ಹಾಕಿರುವುದಾಗಿ ತಿಳಿದು ಬಂದಿದೆ

maithri

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೊಲೆಯಾದ ಯುವಕ. ಕಡಬ ತಾಲೂಕಿನ ನೆಟ್ಟಣ ಚೆಂಡೆಹಿತ್ತಿಲು ನಿವಾಸಿ ಕುಶಾಲಪ್ಪ ಎಂಬವರ ಪುತ್ರ ಪ್ರತಿಕ್ ಎಂಬಾತನನ್ನು ಕೊಲೆ ಆರೋಪದಲ್ಲಿ ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ಮೂಲಗಳ ಪ್ರಕಾರ ಪೊಲೀಸ್ ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹತ್ಯೆ ನಡೆಸಿದ ಬಳಿಕ ಮೃತದೇಹವನ್ನು ಕಾಡಿನಲ್ಲಿ ಪೆಟ್ರೋಲ್ ಸುರಿದು ಸುಟ್ಟಿರುವುದಾಗಿ ಬಾಯ್ದಿಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೇ ಕಾಡಿನಲ್ಲಿ ಮರವೊಂದರ ಕೆಳಗಡೆ ಶವವನ್ನು ಬೀಸಾಡಿರುವುದನ್ನು ಪ್ರತಿಕ್ ವಿಚಾರಣೆ ಸಂದರ್ಭ ತಿಳಿಸಿದ್ದಾನೆ. ಹೀಗಾಗಿ  ಪೊಲೀಸರು ಶವವನ್ನು ಪತ್ತೆ ಹಚ್ಚುವ ವೇಳೆ ಅತನನ್ನು ಕರೆದುಕೊಂಡು ಬಂದಿದ್ದರು ಆತ ತಿಳಿಸಿದ ಸ್ಥಳದಲ್ಲೆ ಸಂದೀಪ್ ಶವ ದೊರೆತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…