tamanvi
ಕರಾವಳಿ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು: ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ರಕ್ಷಿಸಿದ ನಿರ್ವಾಹಕ!!

D_shiva_bhat
ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಇದನ್ನು ಅರಿತ ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಇದನ್ನು ಅರಿತ ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ವರದಿಯಾಗಿದೆ.

maithri

ಮಂಗಳೂರು ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್‌ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಸಂದರ್ಭ ಬಸ್‌ ಕಡಬ ತಾಲೂಕಿನ ಆತೂರಿಗೆ ಬರುತ್ತಿದ್ದಂತೆಯೇ ಬಸ್ಸಿನ ಚಾಲಕ ಗಣಪತಿ ಅವರು ಚಾಲನೆಯ ವೇಗ ಕಡಿಮೆಮಾಡ ತೊಡಗಿದರು. ಇದನ್ನು ಕಂಡು ಸಂಶಯಗೊಂಡ ಬಸ್ ನಿರ್ವಾಹಕ, ಚಾಲಕನ ಹತ್ತಿರ ಬಂದು ಮಾತನಾಡಲು ಪ್ರಯತ್ನಿಸು ವಾಗ ಬಸ್ ಚಾಲಕ ಎದೆನೋವು ಕಾಣಿಸಿಕೊಂಡಿರುವುದು ಅರಿವಾಗಿದ್ದು, ಕೆಲ ಕ್ಷಣಗಳಲ್ಲಿಯೇ ಬಸ್‌ನ ಚಾಲಕ ಮಾತನಾಡದಂತಹ ಸ್ಥಿತಿಗೆ ತಲುಪಿದರು.

ಕೂಡಲೇ ಅವರನ್ನು ಬಸ್ ನಿಲ್ಲಿಸಲು ತಿಳಿಸಿದ್ದಲ್ಲದೇ, ಅವರನ್ನು ಬಸ್‌ನ ಸೀಟ್‌ನಲ್ಲಿ ಮಲಗಿಸಿ ಸಮೀಪದಲ್ಲಿ ಆಸ್ಪತ್ರೆ ಇರದಿರುವುದರಿಂದ ತಾನೇ ಬಸ್ ಅನ್ನು ಚಲಾಯಿಸಿಕೊಂಡು ಬಂದು ಸುಮಾರು ಏಳು ಕಿ.ಮೀ. ದೂರವಿರುವ ಉಪ್ಪಿನಂಗಡಿ ಬಸ್‌ ನಿಲ್ದಾಣಕ್ಕೆ ತಲುಪಿಸಿದರಲ್ಲದೆ, ಹತ್ತಿರವಿರುವ ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಬಳಿಕ ಅವರನ್ನು ಆಯಂಬುಲೆನ್ಸ್‌ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಸ್‌ನಲ್ಲಿ ಸುಮಾರು 30ರಷ್ಟು ಪ್ರಯಾಣಿಕರಿದ್ದರು. ನಿರ್ವಾಹಕನ ತಕ್ಷಣದ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…