ಕರಾವಳಿ

ಮುರುಡೇಶ್ವರ: ಮೂವರು ವಿದ್ಯಾರ್ಥಿನಿಯರು ಸಮುದ್ರ ಪಾಲು; ಓರ್ವಳ ಶವ ಪತ್ತೆ!!

ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

ವಿದ್ಯಾರ್ಥಿಗಳು ಕಡಲತೀರದಲ್ಲಿ ಇಳಿದು ಆಟವಾಡುತ್ತಿದ್ದರು. ಈ ವೇಳೆ ಏಳು ಜನ ವಿದ್ಯಾರ್ಥಿಗಳು ಅಲೆಯ ರಭಸಕ್ಕೆ ಕೊಚ್ಚಿ ಹೋದರು. ಲೈಫ್ ಗಾರ್ಡ್ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿದರು. ಈ ವೇಳೆ ನಾಲ್ವರು ಆಳ ಸಮುದ್ರಕ್ಕೆ ತೇಲಿ ಹೋದರು. ಒಬ್ಬ ವಿದ್ಯಾರ್ಥಿ ಶ್ರಾವಂತಿ(15) ಮೃತ ದೇಹ ಪತ್ತೆಯಾಗಿದೆ. ದೀಪಾ, ಲಾವಣ್ಯ, ಲಿಪಿಕಾ ಅವರಿಗೆ ಹುಡುಕಾಟ ನಡೆದಿದೆ. ಪೊಲೀಸರು ಸ್ಥಳದಲ್ಲಿದ್ದು, ದುರಂತವನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಸ್ನೇಹಿತೆಯರನ್ನು ಕಳೆದು ಕೊಂಡು ದುಃಖಿತರಾಗಿದ್ದಾರೆ. ಕೋಲಾರದ ಮುಳುಬಾಗಿಲು ಶಾಲೆ ಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…