tamanvi
ಕರಾವಳಿ

ಬಲ್ನಾಡು ಗ್ರಾಮ ಅರಣ್ಯ ಸಮಿತಿಯ ನೂತನ ಅಧ್ಯಕ್ಷರಾಗಿ  ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ವೀರಣ್ಣರಿದ್ದು, ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿನಲಿಕೆ ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ. ಕುಸುಮ ಎಂ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ. ಈ ಸಂದರ್ಭ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…