tamanvi
ಕರಾವಳಿ

ಕಡಬ: ಸೇತುವೆ ಅಧಿಕೃತ ಉದ್ಘಾಟನೆಗೆ ಮುನ್ನವೇ ಲಕ್ಷ ರೂ ಮೌಲ್ಯದ ಸೋಲಾರ್ ದೀಪಗಳನ್ನು ಕದ್ದೊಯ್ದ ಕಳ್ಳರು

D_shiva_bhat
ಎಡಮಂಗಲ-ಕಡಬವನ್ನು ಸಂಪರ್ಕಿಸುವ ಪ್ರಮುಖ ಸೇತುವೆಯಾಗಿರುವ ಪಿಜಕ್ಕಳದ ಪಾಲೋಳಿ ಸೇತುವೆಯಲ್ಲಿ ಅಳವಡಿಸಿರುವ ಲಕ್ಷ ರೂ ಬೆಲೆಬಾಳುವ ದಾರಿದೀಪಗಳನ್ನು ಕಳ್ಳರು ಕದ್ದೊಯ್ದ ಘಟನೆ ಡಿ.10 ರಾತ್ರಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ : ಎಡಮಂಗಲ-ಕಡಬವನ್ನು ಸಂಪರ್ಕಿಸುವ ಪ್ರಮುಖ ಸೇತುವೆಯಾಗಿರುವ ಪಿಜಕ್ಕಳದ ಪಾಲೋಳಿ ಸೇತುವೆಯಲ್ಲಿ ಅಳವಡಿಸಿರುವ ಲಕ್ಷ ರೂ ಬೆಲೆಬಾಳುವ ದಾರಿದೀಪಗಳನ್ನು ಕಳ್ಳರು ಕದ್ದೊಯ್ದ ಘಟನೆ ಡಿ.10 ರಾತ್ರಿ ನಡೆದಿದೆ

maithri

ಇತ್ತೀಚೆಗೆ ಸುಳ್ಯ ಶಾಸಕಿ ಮುಂದಾಳತ್ವದಲ್ಲಿ ಸೇತುವೆಯನ್ನು ತಾತ್ಕಾಲಿಕವಾಗಿ ಉದ್ಘಾಟಿಸಿದ ಬಳಿಕ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಧಿಕವಾಗಿದೆ. ಈ ಸೇತುವೆ ನಿರ್ಮಾಣದ ನಂತರ ಲೋಕೋಪಯೋಗಿ ಇಲಾಖೆಯು ಸೋಲಾರ್ ಬೀದಿ ದೀಪಗಳನ್ನು ಕೂಡ ಅಳವಡಿಸಲಾಗಿತ್ತು. ಇದೀಗ ಎರಡು ಸೋಲಾರ್ ದೀಪಗಳನ್ನು ಕಳ್ಳರು ಎಗರಿಸಿದ್ದಾರೆ.

ಈ ನೂತನ ಸೇತುವೆ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಸಹಿತ ಕಳ್ಳಸಾಗಣೆಯಂತಹ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಉಳಿದ ದಾರಿ ದೀಪಗಳು ಕಳ್ಳರ ಪಾಲಾಗಲಿದ್ದು ಸ್ಥಳೀಯಾಡಳಿತ ಮತ್ತು ಪೊಲೀಸರು ಕ್ರಮ ಕೈಗೊಳ್ಳುವಂತೆ ಆ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.

ಸುಳ್ಯ-ಕಡಬ ಉಭಯ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಈ ಪ್ರದೇಶಕ್ಕೆ ಪೊಲೀಸರು ಗಸ್ತು ತಿರುಗಬೇಕು ಜೊತೆಗೆ ಸೇತುವೆ ಬಳಿ ಸಿಸಿಟಿವಿ ಅಳವಡಿಸಬೇಕಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…