Gl
ಕರಾವಳಿ

ಬಸ್ ಬ್ರೇಕ್ ಫೈಲ್: ಸಿನಿಮೀಯ ರೀತಿಯಲ್ಲಿ ಪ್ರಯಾಣಿಕರ ರಕ್ಷಣೆ!!

ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Pashupathi

ಬೆಳಗ್ಗೆ 8 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದುವರಿದ ಬಸ್‌ ಬಲ್ಲಾಳ್‌ಬಾಗ್ ತಂಗುದಾಣದತ್ತ ಬಂದಿದೆ. ಈ ವೇಳೆ ಚಾಲಕ ಸಿದ್ದಿಕ್ ಎರ್ಮಾಳ್ ಅವರಿಗೆ ಬಸ್ಸಿನ ಬ್ರೇಕ್ ವೈಫಲ್ಯ ಆಗಿರುವುದು ಗೊತ್ತಾಯಿತು. ಕೂಡಲೇ ಬಸ್ಸನ್ನು ರಸ್ತೆಯ ಎಡಕ್ಕೆ ತಿರುಗಿಸಿದ್ದಾರೆ. ಅಲ್ಲಿ ಫುಟ್‌ಪಾತ್ ಮಟ್ಟ ರಸ್ತೆಗಿಂತ ಎತ್ತರದಲ್ಲಿದ್ದು, ಆದರೂ ಬಸ್ಸು ಅದರ ಮೇಲೆ ಹತ್ತಿದೆ.

akshaya college

ಆದರೆ ಹಿಂದಿನ ಚಕ್ರಗಳು ಫುಟ್‌ಪಾತ್ ಮೇಲಕ್ಕೆ ಬರಲು ಸಾಧ್ಯವಾಗದೆ, ಬಸ್ಸು ಮುಂದಕ್ಕೆ ಚಲಿಸದೆ ಅಲ್ಲೇ ನಿಂತಿದೆ. ಬೆಳಗ್ಗಿನ ವೇಳೆಯಾಗಿದ್ದರಿಂದ ಬಸ್ಸಿನಲ್ಲಿ ಸಾಕಷ್ಟು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…