tamanvi
ಕರಾವಳಿ

ಬಸ್ ಬ್ರೇಕ್ ಫೈಲ್: ಸಿನಿಮೀಯ ರೀತಿಯಲ್ಲಿ ಪ್ರಯಾಣಿಕರ ರಕ್ಷಣೆ!!

D_shiva_bhat
ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

maithri

ಬೆಳಗ್ಗೆ 8 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದುವರಿದ ಬಸ್‌ ಬಲ್ಲಾಳ್‌ಬಾಗ್ ತಂಗುದಾಣದತ್ತ ಬಂದಿದೆ. ಈ ವೇಳೆ ಚಾಲಕ ಸಿದ್ದಿಕ್ ಎರ್ಮಾಳ್ ಅವರಿಗೆ ಬಸ್ಸಿನ ಬ್ರೇಕ್ ವೈಫಲ್ಯ ಆಗಿರುವುದು ಗೊತ್ತಾಯಿತು. ಕೂಡಲೇ ಬಸ್ಸನ್ನು ರಸ್ತೆಯ ಎಡಕ್ಕೆ ತಿರುಗಿಸಿದ್ದಾರೆ. ಅಲ್ಲಿ ಫುಟ್‌ಪಾತ್ ಮಟ್ಟ ರಸ್ತೆಗಿಂತ ಎತ್ತರದಲ್ಲಿದ್ದು, ಆದರೂ ಬಸ್ಸು ಅದರ ಮೇಲೆ ಹತ್ತಿದೆ.

ಆದರೆ ಹಿಂದಿನ ಚಕ್ರಗಳು ಫುಟ್‌ಪಾತ್ ಮೇಲಕ್ಕೆ ಬರಲು ಸಾಧ್ಯವಾಗದೆ, ಬಸ್ಸು ಮುಂದಕ್ಕೆ ಚಲಿಸದೆ ಅಲ್ಲೇ ನಿಂತಿದೆ. ಬೆಳಗ್ಗಿನ ವೇಳೆಯಾಗಿದ್ದರಿಂದ ಬಸ್ಸಿನಲ್ಲಿ ಸಾಕಷ್ಟು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…