tamanvi
ಕರಾವಳಿ

ಪುಣಚ: ಪತಿಯಿಂದ ಪತ್ನಿಯ ಕೊಲೆ; ಆರೋಪಿ ಪತಿ ಪೊಲೀಸ್ ವಶಕ್ಕೆ..!

D_shiva_bhat
ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುಣಚ: ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

maithri

ಮೃತ ದುರ್ದೈವಿಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ.

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎಂಬ ಮಾಹಿತಿ ಸಾರ್ವಜನಿಕರಿಂದ ತಿಳಿದು ಬಂದಿದೆ. ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಹಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದೀಗ ನಿನ್ನೆ ಮುಂಜಾನೆ ಲೀಲಾರವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ವೆನ್ಸಾಕ್ ಆಸ್ಪತ್ರೆಗೆ ವಿಟ್ಲ ಪೋಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮೊದಲಿಗೆ ಈ ಪ್ರಕರಣ ಸಹಜ ಸಾವಿನಂತಿದ್ದರೂ ಬಳಿಕ ಪೊಲೀಸ್‌ ತನಿಖೆಯಿಂದ ಇದು ಕೊಲೆ ಎಂದು ಸಾಬೀತಾಗಿದೆ. ಆರೋಪಿ ಸಂಜೀವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…