tamanvi
ಕರಾವಳಿ

ಮಂಗಳೂರು: ಸಿಲಿಂಡರ್‌ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!!

D_shiva_bhat
ಮಂಜನಾಡಿಯಲ್ಲಿ ಸಿಲಿಂಡ‌ರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಜನಾಡಿಯಲ್ಲಿ ಸಿಲಿಂಡ‌ರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.

maithri

ಡಿಸೆಂಬರ್ ಏಳರಂದು ರಾತ್ರಿ ಮನೆಯಲ್ಲಿ ತಾಯಿ ಮತ್ತು ಮೂವರು ಹೆಣ್ಮಕ್ಕಳು ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಪೋಟಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಮನೆಯವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮಕ್ಕಳ ತಾಯಿ ಕುಬ್ರಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಜನಾಡಿಯ ಖಂಡಿಗ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸೊಗೊಂಡ ಶಬ್ದ ಕೇಳಿ ಬಂದಿದೆ. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಬಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಪಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿದ್ರಗೊಂಡು ಸುಟ್ಟು ಕರಕಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…