tamanvi
ಕರಾವಳಿ

ವಿಟ್ಲ:ಗ್ಯಾಸ್  ಸಿಲಿಂಡರ್ ಕಳ್ಳತನ; ಆರೋಪಿ ಪೋಲಿಸ್ ಬಲೆಗೆ!!

D_shiva_bhat
ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಹಗಲು ಹೊತ್ತಿನಲ್ಲೇ ಕಳ್ಳರು ಎಗರಿಸಿದ ಘಟನೆ ವಿಟ್ಲ ಸಮೀಪದ ಕುಂಡಡ್ಕ ಹಡೀಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಇಡ್ತಿದು ಒಡ್ಯಡ್ಕ ನಿವಾಸಿ ಅಶ್ರಫ್ ಯಾನೆ ಅಚ್ಚುಕು ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಹಗಲು ಹೊತ್ತಿನಲ್ಲೇ ಕಳ್ಳರು ಎಗರಿಸಿದ ಘಟನೆ ವಿಟ್ಲ ಸಮೀಪದ ಕುಂಡಡ್ಕ ಹಡೀಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಇಡ್ತಿದು ಒಡ್ಯಡ್ಕ ನಿವಾಸಿ ಅಶ್ರಫ್ ಯಾನೆ ಅಚ್ಚುಕು ಎಂದು ಗುರುತಿಸಲಾಗಿದೆ.

maithri

ಹಡೀಲು ನಿವಾಸಿ ಪ್ರವೀಣ್ ಎಂಬವರ ಮನೆಯಲ್ಲಿ ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್‌ ಸಿಲಿಂಡ‌ನ್ನು ಕಳ್ಳರು ಹಗಲು ಹೊತ್ತಿನಲ್ಲೇ ಕದ್ದು ಪರಾರಿಯಾಗಿದ್ದು, ಸಿಸಿ ಕ್ಯಾಮೆರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದೆ. ಕೂಡಲೇ ಸಾರ್ವಜನಿಕರು ಕಳ್ಳರ ಹಾದಿಯನ್ನು ಬೆನ್ನುಹತ್ತಿ ಬೇರಿಕೆ ಬಳಿ ಕಳ್ಳರನ್ನು ಅಡ್ಡಗಟ್ಟಿ ವಿಚಾರಿಸಿದ್ದಾರೆ. ಈ ವೇಳೆ ಸಾಕ್ಷಿ ಸಮೇತ ಖದೀಮರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಕೂಡಲೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಆರೋಪಿ ಅಶ್ರಫ್ ಯಾನೆ ಅಚೂಕು ಸಹಿತ ಕಳವಾದ ಗ್ಯಾಸ್‌ ಸಿಲಿಂಡರ್‌ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈತನೊಂದಿಗೆ ಇನ್ನೊಬ್ಬ ಆಟೋ ಚಾಲಕನೂ ಇದ್ದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಈತ ಪರಾರಿಯಾಗಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…