tamanvi
ಕರಾವಳಿ

ಕಾರ್ಕಳ: ಹೊತ್ತಿ ಉರಿದ ಟೂರಿಸ್ಟ್ ಬಸ್; ಪ್ರಯಾಣಿಕರು ಅಪಾಯದಿಂದ ಪಾರು!!

D_shiva_bhat
ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ.

maithri

ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ. ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ವಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.

ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖ‌ರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…