tamanvi
ಕರಾವಳಿ

ಕೊಕ್ಕಡ : ಬಸ್-ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!!

D_shiva_bhat
ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತ

ಈ ಸುದ್ದಿಯನ್ನು ಶೇರ್ ಮಾಡಿ

ಕೊಕ್ಕಡ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

maithri

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…